ಚಾಮರಾಜನಗರದಿಂದ ಸತ್ಯಮಂಗಲಕ್ಕೆ ಹೋಗುವ ಮಾರ್ಗದಲ್ಲಿರುವ ಹಾಗೂ ತಮಿಳುನಾಡು ಗಡಿಗೆ ಹೊಂದಿಕೊಂಡಿರುವ ಪುಣಜನೂರು ದಟ್ಟ ಅರಣ್ಯ ಪ್ರದೇಶದಲ್ಲಿ ಶನಿವಾರ ಬೆಳಿಗ್ಗೆ 9 ಗಂಟೆ ಸಮಯದಲ್ಲಿ ಶಸ್ತ್ರ ಸಜ್ಜಿತ ವೀರಪ್ಪನ್ ತನ್ನ ತಂಡದೊಂದಿಗೆ ಮಿಂಚಿನ ಕಾರ್ಯಾಚರಣೆ ನಡೆಸಿ, ಕರ್ತವ್ಯ ನಿರತರಾಗಿದ್ದ ಒಬ್ಬ ವನಪಾಲಕ, ಇಬ್ಬರು ಅರಣ್ಯ ರಕ್ಷಕರು ಹಾಗೂ ಆರು ಮಂದಿ ಅರಣ್ಯ ಕಾವಲುಗಾರರನ್ನು ಅಪಹರಿಸಿಕೊಂಡು ಹೋಗಿದ್ದಾನೆ.