<p>l 3 ರೈಲುಗಳಲ್ಲಿ ಬಾಂಬ್ ಸ್ಫೋಟ: 10 ಬಲಿ</p>.<p>ಚೆನ್ನೈ, ಡಿಸೆಂಬರ್ 6 (ಪಿಟಿಐ): ಅಯೋಧ್ಯೆಯ ಬಾಬ್ರಿ ಮಸೀದಿ ಕೆಡವಿದ ದಿನವಾದ ಇಂದು ತಮಿಳುನಾಡು ಹಾಗೂ ಕೇರಳದ ಮೂರು ರೈಲುಗಳ ಬೋಗಿಗಳಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಿಂದ ಕನಿಷ್ಠ 10 ಮಂದಿ ಮೃತಪಟ್ಟು, 69 ಜನರು ಗಾಯಗೊಂಡಿರುವ ಘಟನೆಗಳು ನಡೆದಿವೆ.</p>.<p>ಮದುರೆಗೆ ಹೊರಟಿದ್ದ ಪಾಂಡಿಯನ್ ಎಕ್ಸ್ಪ್ರೆಸ್ ರೈಲಿನ ಬೋಗಿಗಳಲ್ಲಿ ಬೆಳಿಗ್ಗೆ 5.15ರ ವೇಳೆಗೆ ತಿರುಚಿನಾಪಳ್ಳಿ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸಿದಾಗ ಐವರು ಸತ್ತು, 15 ಮಂದಿ ಗಾಯಗೊಂಡಿದ್ದಾರೆ.</p>.<p>ಈರೋಡ್ನ ಪೆರುಂತುರೈ ಸಮೀಪದ ತೊಟ್ಟಿಪಾಳ್ಯಂನಲ್ಲಿ ಕೊಯಮತ್ತೂರಿಗೆ ಹೊರಟಿದ್ದ ಚೇರನ್ ಎಕ್ಸ್ಪ್ರೆಸ್ ರೈಲಿನ ಬೋಗಿಯಲ್ಲಿ ಬೆಳಿಗ್ಗೆ 5.10ರ ವೇಳೆಗೆ ಬಾಂಬ್ ಸ್ಫೋಟಿಸಿ ಇಬ್ಬರು ಮೃತಪಟ್ಟು, 9 ಮಂದಿ ಗಾಯಗೊಂಡಿದ್ದಾರೆ. ಕೇರಳದ ತ್ರಿಶ್ಶೂರ್ನಲ್ಲಿ ಚೆನ್ನೈ–ಅಲಪ್ಪುಳ ಎಕ್ಸ್ಪ್ರೆಸ್ ರೈಲಿನ ಬೋಗಿಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟಕ್ಕೆ ಮೂವರು ಮೃತಪಟ್ಟಿದ್ದಾರೆ.</p>.<p>l→11ರಂದು ಬಂಗಾರಪ್ಪ<br />ಹೊಸ ಪಕ್ಷ ಉದಯ</p>.<p>ಬೆಂಗಳೂರು, ಡಿಸೆಂಬರ್ 6– ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ನೇತೃತ್ವದ ನೂತನ ರಾಜಕೀಯ ಪಕ್ಷವಾದ ‘ಕರ್ನಾಟಕ ವಿಕಾಸ ಪಕ್ಷ’ ಈ ತಿಂಗಳ 11ರಂದು ಇಲ್ಲಿ ವಿಧ್ಯುಕ್ತವಾಗಿ ಆರಂಭವಾಗಲಿದೆ. ಕಾಂಗ್ರೆಸ್ ಪಕ್ಷವನ್ನು ನಿನ್ನೆಯಷ್ಟೇ ತೊರೆದು ದೆಹಲಿಯಿಂದ ಇಂದು ನಗರಕ್ಕೆ ಆಗಮಿಸಿದ ಬಂಗಾರಪ್ಪ ಅವರು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರಿಗೆ ಈ ವಿಚಾರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>l 3 ರೈಲುಗಳಲ್ಲಿ ಬಾಂಬ್ ಸ್ಫೋಟ: 10 ಬಲಿ</p>.<p>ಚೆನ್ನೈ, ಡಿಸೆಂಬರ್ 6 (ಪಿಟಿಐ): ಅಯೋಧ್ಯೆಯ ಬಾಬ್ರಿ ಮಸೀದಿ ಕೆಡವಿದ ದಿನವಾದ ಇಂದು ತಮಿಳುನಾಡು ಹಾಗೂ ಕೇರಳದ ಮೂರು ರೈಲುಗಳ ಬೋಗಿಗಳಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಿಂದ ಕನಿಷ್ಠ 10 ಮಂದಿ ಮೃತಪಟ್ಟು, 69 ಜನರು ಗಾಯಗೊಂಡಿರುವ ಘಟನೆಗಳು ನಡೆದಿವೆ.</p>.<p>ಮದುರೆಗೆ ಹೊರಟಿದ್ದ ಪಾಂಡಿಯನ್ ಎಕ್ಸ್ಪ್ರೆಸ್ ರೈಲಿನ ಬೋಗಿಗಳಲ್ಲಿ ಬೆಳಿಗ್ಗೆ 5.15ರ ವೇಳೆಗೆ ತಿರುಚಿನಾಪಳ್ಳಿ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸಿದಾಗ ಐವರು ಸತ್ತು, 15 ಮಂದಿ ಗಾಯಗೊಂಡಿದ್ದಾರೆ.</p>.<p>ಈರೋಡ್ನ ಪೆರುಂತುರೈ ಸಮೀಪದ ತೊಟ್ಟಿಪಾಳ್ಯಂನಲ್ಲಿ ಕೊಯಮತ್ತೂರಿಗೆ ಹೊರಟಿದ್ದ ಚೇರನ್ ಎಕ್ಸ್ಪ್ರೆಸ್ ರೈಲಿನ ಬೋಗಿಯಲ್ಲಿ ಬೆಳಿಗ್ಗೆ 5.10ರ ವೇಳೆಗೆ ಬಾಂಬ್ ಸ್ಫೋಟಿಸಿ ಇಬ್ಬರು ಮೃತಪಟ್ಟು, 9 ಮಂದಿ ಗಾಯಗೊಂಡಿದ್ದಾರೆ. ಕೇರಳದ ತ್ರಿಶ್ಶೂರ್ನಲ್ಲಿ ಚೆನ್ನೈ–ಅಲಪ್ಪುಳ ಎಕ್ಸ್ಪ್ರೆಸ್ ರೈಲಿನ ಬೋಗಿಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟಕ್ಕೆ ಮೂವರು ಮೃತಪಟ್ಟಿದ್ದಾರೆ.</p>.<p>l→11ರಂದು ಬಂಗಾರಪ್ಪ<br />ಹೊಸ ಪಕ್ಷ ಉದಯ</p>.<p>ಬೆಂಗಳೂರು, ಡಿಸೆಂಬರ್ 6– ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ನೇತೃತ್ವದ ನೂತನ ರಾಜಕೀಯ ಪಕ್ಷವಾದ ‘ಕರ್ನಾಟಕ ವಿಕಾಸ ಪಕ್ಷ’ ಈ ತಿಂಗಳ 11ರಂದು ಇಲ್ಲಿ ವಿಧ್ಯುಕ್ತವಾಗಿ ಆರಂಭವಾಗಲಿದೆ. ಕಾಂಗ್ರೆಸ್ ಪಕ್ಷವನ್ನು ನಿನ್ನೆಯಷ್ಟೇ ತೊರೆದು ದೆಹಲಿಯಿಂದ ಇಂದು ನಗರಕ್ಕೆ ಆಗಮಿಸಿದ ಬಂಗಾರಪ್ಪ ಅವರು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರಿಗೆ ಈ ವಿಚಾರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>