ಬೆಂಗಳೂರು, ಜ. 8– ಪ್ರಧಾನಿ ಸೂಚನೆಯಂತೆ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ಸರ್ಕಾರದ ಕ್ರಮವನ್ನು ಪ್ರತಿಭಟಿಸಲು ‘ಕೃಷ್ಣಾ– ಕಾವೇರಿ ಹೋರಾಟ’ಕ್ಕೆ ಕರೆ ನೀಡಿದ್ದ ಬೆಂಗಳೂರು ಬಂದ್ ಇಂದು ಸಂಪೂರ್ಣ ಯಶಸ್ವಿಯಾಯಿತು. ವ್ಯಾಪಕ ಬಂದೋಬಸ್ತ್ ನಡುವೆಯೇ ನಡೆದ ಕಲ್ಲು ತೂರಾಟ ಹಾಗೂ ಬೆಂಕಿ ಹಚ್ಚಿದ ಕೆಲವು ಪ್ರಕರಣಗಳನ್ನು ಹೊರತುಪಡಿಸಿದರೆ ಉಳಿದಂತೆ ಬಂದ್ ಶಾಂತಿಯುತವಾಗಿತ್ತು.