ಕಾವೇರಿ: ಪ್ರಧಾನಿ ಮಧ್ಯಸ್ಥಿಕೆಗೆ ಕೋರ್ಟ್ ಆದೇಶ
ನವದೆಹಲಿ, ಡಿ. 28– ತಮಿಳುನಾಡಿನಲ್ಲಿ ಒಣಗುತ್ತಿರುವ ಬೆಳೆಗಳನ್ನು ರಕ್ಷಿಸಲು ಕೂಡಲೇ 11 ಟಿಎಂಸಿ ಅಡಿ ನೀರನ್ನು ಬಿಡಬೇಕೆಂಬ ಕಾವೇರಿ ನ್ಯಾಯಮಂಡಳಿಯ ಆಜ್ಞೆಯಿಂದ ಉದ್ಭವಿಸಿರುವ ಬಿಕ್ಕಟ್ಟಿಗೆ ಇನ್ನು ಎರಡು ದಿನಗಳೊಳಗೆ ಕರ್ನಾಟಕ ಮತ್ತು ತಮಿಳುನಾಡಿನ ಮುಖ್ಯಮಂತ್ರಿಗಳು, ವಿಧಾನಮಂಡಲದ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಕಾವೇರಿ ಅಚ್ಚುಕಟ್ಟು ಪ್ರದೇಶದ ಎಂ.ಪಿಗಳ ಸಭೆ ಕರೆದು ಸೂಕ್ತ ಪರಿಹಾರ ಹುಡುಕುವಂತೆ ಸುಪ್ರೀಂ ಕೋರ್ಟ್ ಇಂದು ಪ್ರಧಾನಿ ಪಿ.ವಿ. ನರಸಿಂಹರಾವ್ ಅವರಿಗೆ ಆದೇಶಿಸಿತು.