ಕಾವೇರಿ: ಇಂದು ಪ್ರಧಾನಿ ಸಮ್ಮುಖ 4 ರಾಜ್ಯ ಮುಖ್ಯಮಂತ್ರಿಗಳ ಸಭೆ
ನವದೆಹಲಿ, ಡಿ. 29– ತಮಿಳುನಾಡಿಗೆ ಕೂಡಲೇ 11 ಟಿಎಂಸಿ ಅಡಿ ನೀರು ಬಿಡಬೇಕು ಎಂಬ ಕಾವೇರಿ ನ್ಯಾಯಮಂಡಳಿ ಆಜ್ಞೆಯಿಂದ ಉಂಟಾಗಿರುವ ವಿವಾದಕ್ಕೆ ಪರಿಹಾರ ಹುಡುಕಲು ಸುಪ್ರೀಂ ಕೋರ್ಟ್ ಆದೇಶದಂತೆ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರು ನಾಳೆ ರಾತ್ರಿ 7.45ಕ್ಕೆ ಇಲ್ಲಿನ ಹೈದರಾಬಾದ್ ಭವನದಲ್ಲಿ ಕರ್ನಾಟಕ, ತಮಿಳುನಾಡು, ಕೇರಳ, ಪುದುಚೇರಿ ಮುಖ್ಯಮಂತ್ರಿಗಳು ಮತ್ತು ಇತರ ನಾಯಕರ ಸಭೆ ಕರೆದಿದ್ದಾರೆ.