<p><strong>ನಗರ ಭೂ ಕಬಳಿಕೆ ಪತ್ತೆಗೆ ಶೀಘ್ರವೇ ಉನ್ನತ ಸಮಿತಿ</strong></p>.<p>ಬೆಂಗಳೂರು, ಅ. 29– ಸರ್ಕಾರಿ ಭೂಮಿ ಕಬಳಿಕೆಯೂ ಸೇರಿದಂತೆ ನಗರದ ಎಲ್ಲ ಭೂ ಅಕ್ರಮಗಳ ಪತ್ತೆಗೆ ಪೊಲೀಸ್ ಮತ್ತು ಕಂದಾಯ ಇಲಾಖೆಗಳ ಉನ್ನತ ಅಧಿಕಾರಿಗಳ ಸಂಯುಕ್ತ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧರಿಸಿದ್ದು ಈ ತಂಡ ಇನ್ನು ಮೂರು ದಿನಗಳೊಳಗಾಗಿ ತನ್ನ ಕಾರ್ಯ ಆರಂಭಿಸಲಿದೆ.</p>.<p>ನಗರ ಸಂಚಾರ ವ್ಯವಸ್ಥೆ ಹಾಗೂ ನಗರ ರಸ್ತೆಗಳ ವೀಕ್ಷಣೆ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ.ದೇವೇಗೌಡ ಈ ವಿಷಯವನ್ನು ಪ್ರಕಟಿಸಿದರು.</p>.<p>ಕಂದಾಯ ಇಲಾಖೆ, ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಮಹಾನಗರ ಪಾಲಿಕೆಗಳಿಗೆ ಸೇರಿದ ನೂರಾರು ಎಕರೆ ಭೂಮಿ ಕಬಳಿಕೆಯೂ ಹಲವಾರು ವರ್ಷಗಳಿಂದ ನಡೆಯುತ್ತಲೇ ಇದೆ. ಈ ಅಕ್ರಮದಲ್ಲಿ ಕೋಟ್ಯಂತರ ರೂಪಾಯಿಗಳ ಅವ್ಯವಹಾರ ನಡೆದಿರುವುದರಲ್ಲಿ ಅನುಮಾನವೇ ಇಲ್ಲ ಎಂದು ಅವರು ಹೇಳಿದರು.</p>.<p>‘ಇದನ್ನು ಕೊನೆಗಾಣಿಸುವ ಸಲುವಾಗಿ ಒಬ್ಬ ಡಿಐಜಿ, ಇಬ್ಬರು ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಮತ್ತು ಕೆಲವು ಕಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಉನ್ನತ ಅಧಿಕಾರಿಗಳು ಇರುವ ತನಿಖಾ ತಂಡ (ಟಾಸ್ಕ್ ಫೋರ್ಸ್) ರಚಿಸಲು<br />ತೀರ್ಮಾನಿಸಲಾಗಿದೆ’ ಎಂದು ಅವರು ವಿವರಿಸಿದರು.</p>.<p><strong>ಪ್ರಾದೇಶಿಕ ಪಕ್ಷಗಳ ಜತೆ ಇಂದು ಆಯೋಗದ ಸಭೆ</strong></p>.<p>ಬೆಂಗಳೂರು, ಅ. 29– ಚುನಾವಣಾ ಆಯೋಗವು ದಕ್ಷಿಣ ರಾಜ್ಯಗಳ ಮಾನ್ಯತೆ ಪಡೆದ ಪ್ರಾದೇಶಿಕ ಪಕ್ಷಗಳ ಜತೆಗೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಇಲ್ಲಿ ಚುನಾವಣಾಪೂರ್ವ ಮಾತುಕತೆಗಳನ್ನು ನಡೆಸಲಿದೆ.</p>.<p>ಮುಖ್ಯ ಚುನಾವಣಾ ಆಯುಕ್ತ ಟಿ.ಎನ್. ಶೇಷನ್ ಹಾಗೂ ಮತ್ತಿಬ್ಬರು ಆಯುಕ್ತರಾದ ಡಾ. ಎಂ.ಎಸ್.ಗಿಲ್ ಮತ್ತು ಜಿ.ವಿ.ಜಿ. ಕೃಷ್ಣಮೂರ್ತಿ ಅವರು ವಿವಿಧ ಪ್ರಾದೇಶಿಕ ಪಕ್ಷಗಳ ಪ್ರತಿನಿಧಿಗಳ ಜತೆ ಚುನಾವಣೆಗೆ ಸಂಬಂಧಿಸಿದ ವಿಷಯಗಳ ಬಗೆಗೆ ಮಾತುಕತೆ ನಡೆಸುವರು.</p>.<p>ಕರ್ನಾಟಕದಿಂದ ಆಯೋಗದ ಮಾನ್ಯತೆ ಪಡೆದಿರುವ ಕರ್ನಾಟಕ ಕಾಂಗ್ರೆಸ್ ಪಕ್ಷ ಈ ಸಭೆಯಲ್ಲಿ ಭಾಗವಹಿಸಲಿದೆ. ರಾಜ್ಯದ ಉಳಿದ ಪ್ರಾದೇಶಿಕ ಪಕ್ಷಗಳು ನೋಂದಾಯಿತ ಪಕ್ಷಗಳಾದರೂ ಅವು ಆಯೋಗದ ಮಾನ್ಯತೆ ಪಡೆದಿಲ್ಲ ಎಂಬುದು ಗಮನಾರ್ಹ.</p>.<p>ವಿಧಾನಸೌಧದ ಮೂರನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಬೆಳಿಗ್ಗೆ ಈ ಸಭೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಗರ ಭೂ ಕಬಳಿಕೆ ಪತ್ತೆಗೆ ಶೀಘ್ರವೇ ಉನ್ನತ ಸಮಿತಿ</strong></p>.<p>ಬೆಂಗಳೂರು, ಅ. 29– ಸರ್ಕಾರಿ ಭೂಮಿ ಕಬಳಿಕೆಯೂ ಸೇರಿದಂತೆ ನಗರದ ಎಲ್ಲ ಭೂ ಅಕ್ರಮಗಳ ಪತ್ತೆಗೆ ಪೊಲೀಸ್ ಮತ್ತು ಕಂದಾಯ ಇಲಾಖೆಗಳ ಉನ್ನತ ಅಧಿಕಾರಿಗಳ ಸಂಯುಕ್ತ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧರಿಸಿದ್ದು ಈ ತಂಡ ಇನ್ನು ಮೂರು ದಿನಗಳೊಳಗಾಗಿ ತನ್ನ ಕಾರ್ಯ ಆರಂಭಿಸಲಿದೆ.</p>.<p>ನಗರ ಸಂಚಾರ ವ್ಯವಸ್ಥೆ ಹಾಗೂ ನಗರ ರಸ್ತೆಗಳ ವೀಕ್ಷಣೆ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ.ದೇವೇಗೌಡ ಈ ವಿಷಯವನ್ನು ಪ್ರಕಟಿಸಿದರು.</p>.<p>ಕಂದಾಯ ಇಲಾಖೆ, ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಮಹಾನಗರ ಪಾಲಿಕೆಗಳಿಗೆ ಸೇರಿದ ನೂರಾರು ಎಕರೆ ಭೂಮಿ ಕಬಳಿಕೆಯೂ ಹಲವಾರು ವರ್ಷಗಳಿಂದ ನಡೆಯುತ್ತಲೇ ಇದೆ. ಈ ಅಕ್ರಮದಲ್ಲಿ ಕೋಟ್ಯಂತರ ರೂಪಾಯಿಗಳ ಅವ್ಯವಹಾರ ನಡೆದಿರುವುದರಲ್ಲಿ ಅನುಮಾನವೇ ಇಲ್ಲ ಎಂದು ಅವರು ಹೇಳಿದರು.</p>.<p>‘ಇದನ್ನು ಕೊನೆಗಾಣಿಸುವ ಸಲುವಾಗಿ ಒಬ್ಬ ಡಿಐಜಿ, ಇಬ್ಬರು ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಮತ್ತು ಕೆಲವು ಕಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಉನ್ನತ ಅಧಿಕಾರಿಗಳು ಇರುವ ತನಿಖಾ ತಂಡ (ಟಾಸ್ಕ್ ಫೋರ್ಸ್) ರಚಿಸಲು<br />ತೀರ್ಮಾನಿಸಲಾಗಿದೆ’ ಎಂದು ಅವರು ವಿವರಿಸಿದರು.</p>.<p><strong>ಪ್ರಾದೇಶಿಕ ಪಕ್ಷಗಳ ಜತೆ ಇಂದು ಆಯೋಗದ ಸಭೆ</strong></p>.<p>ಬೆಂಗಳೂರು, ಅ. 29– ಚುನಾವಣಾ ಆಯೋಗವು ದಕ್ಷಿಣ ರಾಜ್ಯಗಳ ಮಾನ್ಯತೆ ಪಡೆದ ಪ್ರಾದೇಶಿಕ ಪಕ್ಷಗಳ ಜತೆಗೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಇಲ್ಲಿ ಚುನಾವಣಾಪೂರ್ವ ಮಾತುಕತೆಗಳನ್ನು ನಡೆಸಲಿದೆ.</p>.<p>ಮುಖ್ಯ ಚುನಾವಣಾ ಆಯುಕ್ತ ಟಿ.ಎನ್. ಶೇಷನ್ ಹಾಗೂ ಮತ್ತಿಬ್ಬರು ಆಯುಕ್ತರಾದ ಡಾ. ಎಂ.ಎಸ್.ಗಿಲ್ ಮತ್ತು ಜಿ.ವಿ.ಜಿ. ಕೃಷ್ಣಮೂರ್ತಿ ಅವರು ವಿವಿಧ ಪ್ರಾದೇಶಿಕ ಪಕ್ಷಗಳ ಪ್ರತಿನಿಧಿಗಳ ಜತೆ ಚುನಾವಣೆಗೆ ಸಂಬಂಧಿಸಿದ ವಿಷಯಗಳ ಬಗೆಗೆ ಮಾತುಕತೆ ನಡೆಸುವರು.</p>.<p>ಕರ್ನಾಟಕದಿಂದ ಆಯೋಗದ ಮಾನ್ಯತೆ ಪಡೆದಿರುವ ಕರ್ನಾಟಕ ಕಾಂಗ್ರೆಸ್ ಪಕ್ಷ ಈ ಸಭೆಯಲ್ಲಿ ಭಾಗವಹಿಸಲಿದೆ. ರಾಜ್ಯದ ಉಳಿದ ಪ್ರಾದೇಶಿಕ ಪಕ್ಷಗಳು ನೋಂದಾಯಿತ ಪಕ್ಷಗಳಾದರೂ ಅವು ಆಯೋಗದ ಮಾನ್ಯತೆ ಪಡೆದಿಲ್ಲ ಎಂಬುದು ಗಮನಾರ್ಹ.</p>.<p>ವಿಧಾನಸೌಧದ ಮೂರನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಬೆಳಿಗ್ಗೆ ಈ ಸಭೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>