ಬೆಂಗಳೂರು, ಅ. 5– ರಾಜ್ಯದಲ್ಲಿ ಭರಪೂರ ಬೆಳೆ ಬಂದಿರುವ ಆಲೂಗಡ್ಡೆ ಮತ್ತು ಈರುಳ್ಳಿ ಬೆಳೆದ ರೈತರ ‘ಕಣ್ಣಲ್ಲಿ ನೀರುಕ್ಕುವುದನ್ನು’ ತಡೆಯಲು ತೀರ್ಮಾನಿಸಿರುವ ಸರ್ಕಾರ ಈ ಬೆಳೆಯನ್ನು ಒರಿಸ್ಸಾ, ಆಂಧ್ರ ಪ್ರದೇಶ, ಪಶ್ಚಿಮ ಬಂಗಾಳವೇ ಅಲ್ಲದೆ ಮಲೇಶಿಯಾ ಹಾಗೂ ಶ್ರೀಲಂಕಾಗಳಿಗೆ ರಫ್ತು ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.