ಉಗ್ರಗಾಮಿಗಳ ವಿರುದ್ಧ ಕಾರ್ಯಾಚರಣೆ ನಡೆಸಿರುವ ಭಾರತದ ಸೇನೆ ದ್ರಾಸ್ ಪ್ರದೇಶದಲ್ಲಿ ವಾಸ್ತವ ನಿಯಂತ್ರಣ ರೇಖೆ ತಲುಪಿದೆ. ಅಲ್ಲದೆ ಇತರ ಪ್ರದೇಶಗಳಲ್ಲಿಯೂ ಅತಿಕ್ರಮಣಕಾರರನ್ನು ಹಿಮ್ಮೆಟ್ಟಿಸಿದೆ ಎಂದು ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಅವರು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ್ದು, ಭಾರತದ ಸೇನೆ ಮತ್ತು ವಾಯುಪಡೆಯ ಜಂಟಿ ಕಾರ್ಯಾಚರಣೆಯಲ್ಲಿ ಕನಿಷ್ಠ 400
ಅತಿಕ್ರಮಣಕಾರರು ಮೃತಪಟ್ಟಿದ್ದಾರೆ ಎಂದರು.