<h2>ರಾಜಕೀಯ ಪರಿಹಾರಕ್ಕೆ ಸಿದ್ಧ: ಕೃಷ್ಣ</h2>.<p><strong>ಬೆಂಗಳೂರು, ನ.30–</strong> ಕೃಷ್ಣಾ ಮೇಲ್ದಂಡೆಯ ಅಲಮಟ್ಟಿ ಜಲಾಶಯದ ಎತ್ತರಕ್ಕೆ ಸಂಬಂಧಿಸಿದಂತೆ ಎದ್ದಿರುವ ವಿವಾದವನ್ನು ಆಂಧ್ರಪ್ರದೇಶ ಜೊತೆ ಚರ್ಚಿಸಿ ರಾಜಕೀಯ ಪರಿಹಾರ ಕಂಡುಕೊಳ್ಳಲು ನಮ್ಮ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಇಂದು ಇಲ್ಲಿ ಹೇಳಿದರು.</p>.<p>ಈ ವಿವಾದವನ್ನು ರಾಜಕೀಯ ಪರಿಹಾರ ಅಥವಾ ನ್ಯಾಯಾಮಗದ ಚೌಕಟ್ಟಿನಲ್ಲಿ ಬಗೆಹರಿಸಿಕೊಳ್ಳಲು ಆಂಧ್ರಪ್ರದೇಶ ಸಿದ್ಧವಿದೆ ಎಂದು ಆ ರಾಜ್ಯದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಹೇಳಿದ್ದಾರೆ ಎಂದು ಪತ್ರಿಕೆಗಳಲ್ಲಿ ವರದಿಯಾಗಿರುವುದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಾಗ ಕೃಷ್ಣ ಅವರು ರಾಜ್ಯದ ನಿಲುವನ್ನು ಸ್ಪಷ್ಟಪಡಿಸಿದರು.</p>.<h2>ಮತ್ತಷ್ಟು ಅನಗತ್ಯ ಹುದ್ದೆಗಳ ರದ್ದಿಗೆ ನಿರ್ಧಾರ</h2>.<p><strong>ಬೆಂಗಳೂರು, ನ.30</strong>– ಆಡಳಿತ ವೆಚ್ಚವನ್ನು ಮಿತಿಗೊಳಿಸುವ ಉದ್ದೇಶದಿಂದ ವಿವಿಧ ಇಲಾಖೆಗಳಲ್ಲಿ ಅನಗತ್ಯವಾಗಿರುವ ಮತ್ತಷ್ಟು ಹುದ್ದೆಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದೆ ಎಂದು ಹಣಕಾಸು ರಾಜ್ಯ ಸಚಿವ ಎಂ.ಶಿವಣ್ಣ ಇಲ್ಲಿ ಹೇಳಿದರು.</p>.<p>‘ಇದೇ ಉದ್ದೇಶದಿಂದ ಹಿಂದಿನ ಸರ್ಕಾರ ವಿವಿಧ ಇಲಾಖೆಗಳಲ್ಲಿ ಸುಮಾರು 20 ಸಾವಿರ ಹುದ್ದೆಗಳನ್ನು ರದ್ದು ಮಾಡುವ ಮೂಲಕ ಒಳ್ಳೆಯ ಕೆಲಸ ಮಾಡಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<h2>ರಾಜಕೀಯ ಪರಿಹಾರಕ್ಕೆ ಸಿದ್ಧ: ಕೃಷ್ಣ</h2>.<p><strong>ಬೆಂಗಳೂರು, ನ.30–</strong> ಕೃಷ್ಣಾ ಮೇಲ್ದಂಡೆಯ ಅಲಮಟ್ಟಿ ಜಲಾಶಯದ ಎತ್ತರಕ್ಕೆ ಸಂಬಂಧಿಸಿದಂತೆ ಎದ್ದಿರುವ ವಿವಾದವನ್ನು ಆಂಧ್ರಪ್ರದೇಶ ಜೊತೆ ಚರ್ಚಿಸಿ ರಾಜಕೀಯ ಪರಿಹಾರ ಕಂಡುಕೊಳ್ಳಲು ನಮ್ಮ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಇಂದು ಇಲ್ಲಿ ಹೇಳಿದರು.</p>.<p>ಈ ವಿವಾದವನ್ನು ರಾಜಕೀಯ ಪರಿಹಾರ ಅಥವಾ ನ್ಯಾಯಾಮಗದ ಚೌಕಟ್ಟಿನಲ್ಲಿ ಬಗೆಹರಿಸಿಕೊಳ್ಳಲು ಆಂಧ್ರಪ್ರದೇಶ ಸಿದ್ಧವಿದೆ ಎಂದು ಆ ರಾಜ್ಯದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಹೇಳಿದ್ದಾರೆ ಎಂದು ಪತ್ರಿಕೆಗಳಲ್ಲಿ ವರದಿಯಾಗಿರುವುದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಾಗ ಕೃಷ್ಣ ಅವರು ರಾಜ್ಯದ ನಿಲುವನ್ನು ಸ್ಪಷ್ಟಪಡಿಸಿದರು.</p>.<h2>ಮತ್ತಷ್ಟು ಅನಗತ್ಯ ಹುದ್ದೆಗಳ ರದ್ದಿಗೆ ನಿರ್ಧಾರ</h2>.<p><strong>ಬೆಂಗಳೂರು, ನ.30</strong>– ಆಡಳಿತ ವೆಚ್ಚವನ್ನು ಮಿತಿಗೊಳಿಸುವ ಉದ್ದೇಶದಿಂದ ವಿವಿಧ ಇಲಾಖೆಗಳಲ್ಲಿ ಅನಗತ್ಯವಾಗಿರುವ ಮತ್ತಷ್ಟು ಹುದ್ದೆಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದೆ ಎಂದು ಹಣಕಾಸು ರಾಜ್ಯ ಸಚಿವ ಎಂ.ಶಿವಣ್ಣ ಇಲ್ಲಿ ಹೇಳಿದರು.</p>.<p>‘ಇದೇ ಉದ್ದೇಶದಿಂದ ಹಿಂದಿನ ಸರ್ಕಾರ ವಿವಿಧ ಇಲಾಖೆಗಳಲ್ಲಿ ಸುಮಾರು 20 ಸಾವಿರ ಹುದ್ದೆಗಳನ್ನು ರದ್ದು ಮಾಡುವ ಮೂಲಕ ಒಳ್ಳೆಯ ಕೆಲಸ ಮಾಡಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>