<h2>ದಳ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆಗೆ ಕಾಂಗ್ರೆಸ್ ನಿರ್ಧಾರ</h2>.<p><strong>ಬೆಂಗಳೂರು, ಅ. 27–</strong> ಈ ತಿಂಗಳ 29ರಿಂದ ಆರಂಭವಾಗುವ ವಿಧಾನಸಭೆ ಅಧಿವೇಶನದಲ್ಲಿ ಜೆ.ಎಚ್.ಪಟೇಲ್ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಪಕ್ಷವು ಅವಿಶ್ವಾಸ ನಿರ್ಣಯ ಮಂಡಿಸಲಿದೆ.</p>.<p>ಕೆಪಿಸಿಸಿ ಅಧ್ಯಕ್ಷ ಧರ್ಮಸಿಂಗ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.</p>.<p>ರಾಜ್ಯದ ಆಡಳಿತ ಜನತಾ ಪಕ್ಷದಲ್ಲಿ ಉದ್ಭವಿಸಿರುವ ಬಿಕ್ಕಟ್ಟು ಮತ್ತು ಅಧಿವೇಶನದ ಅವಧಿಯಲ್ಲಿ ಕಾಂಗ್ರೆಸ್ ಅನುಸರಿಸಬೇಕಾದ ತಂತ್ರವನ್ನು ಸಭೆಯಲ್ಲಿ ವಿವರವಾಗಿ ಚರ್ಚಿಸಲಾಯಿತು ಎಂದು ಪಕ್ಷದ ವಕ್ತಾರ ಬಿ.ಕೆ.ಚಂದ್ರಶೇಖರ್ ತಿಳಿಸಿದ್ದಾರೆ.</p>.<p>ಪಕ್ಷದ ಕಾರ್ಯಕರ್ತರ ಭಾವನೆಗಳನ್ನು ಪರಿಗಣಿಸಿ ಅವಿಶ್ವಾಸ ನಿರ್ಣಯ ಮಂಡಿಸುವುದು ಅನಿವಾರ್ಯ ಕ್ರಮ ಎಂದು ನಿರ್ಧರಿಸಲಾಯಿತು ಎಂದು ಅವರು ಹೇಳಿದ್ದಾರೆ. </p>.<h2>ದೋಣಿ ಮುಳುಗಿ 40 ಮಂದಿ ಜಲ ಸಮಾಧಿ</h2>.<p><strong>ಗುವಾಹಟಿ, ಅ. 27 (ಪಿಟಿಐ, ಯುಎನ್ಐ)</strong>– ಬ್ರಹ್ಮಪುತ್ರ ನದಿಯಲ್ಲಿ ದೋಣಿಯೊಂದು ಮುಳುಗಿ ಸುಮಾರು 40 ಮಂದಿ ಜಲ ಸಮಾಧಿಯಾಗಿದ್ದಾರೆ ಎಂದು ಶಂಕಿಸಲಾದ ದುರ್ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.</p>.<p>ಸುಮಾರು 50 ಜನ ಪ್ರಯಾಣಿಸುತ್ತಿದ್ದ ಯಾಂತ್ರಿಕ ದೋಣಿಯೊಂದು ಸುಕಲೇಶ್ವರ ಘಾಟ್ ಸಮೀಪ ನದಿಯ ಮಧ್ಯ ಭಾಗದಲ್ಲಿದ್ದಾಗ ಮತ್ತೊಂದು ದೋಣಿಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<h2>ದಳ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆಗೆ ಕಾಂಗ್ರೆಸ್ ನಿರ್ಧಾರ</h2>.<p><strong>ಬೆಂಗಳೂರು, ಅ. 27–</strong> ಈ ತಿಂಗಳ 29ರಿಂದ ಆರಂಭವಾಗುವ ವಿಧಾನಸಭೆ ಅಧಿವೇಶನದಲ್ಲಿ ಜೆ.ಎಚ್.ಪಟೇಲ್ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಪಕ್ಷವು ಅವಿಶ್ವಾಸ ನಿರ್ಣಯ ಮಂಡಿಸಲಿದೆ.</p>.<p>ಕೆಪಿಸಿಸಿ ಅಧ್ಯಕ್ಷ ಧರ್ಮಸಿಂಗ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.</p>.<p>ರಾಜ್ಯದ ಆಡಳಿತ ಜನತಾ ಪಕ್ಷದಲ್ಲಿ ಉದ್ಭವಿಸಿರುವ ಬಿಕ್ಕಟ್ಟು ಮತ್ತು ಅಧಿವೇಶನದ ಅವಧಿಯಲ್ಲಿ ಕಾಂಗ್ರೆಸ್ ಅನುಸರಿಸಬೇಕಾದ ತಂತ್ರವನ್ನು ಸಭೆಯಲ್ಲಿ ವಿವರವಾಗಿ ಚರ್ಚಿಸಲಾಯಿತು ಎಂದು ಪಕ್ಷದ ವಕ್ತಾರ ಬಿ.ಕೆ.ಚಂದ್ರಶೇಖರ್ ತಿಳಿಸಿದ್ದಾರೆ.</p>.<p>ಪಕ್ಷದ ಕಾರ್ಯಕರ್ತರ ಭಾವನೆಗಳನ್ನು ಪರಿಗಣಿಸಿ ಅವಿಶ್ವಾಸ ನಿರ್ಣಯ ಮಂಡಿಸುವುದು ಅನಿವಾರ್ಯ ಕ್ರಮ ಎಂದು ನಿರ್ಧರಿಸಲಾಯಿತು ಎಂದು ಅವರು ಹೇಳಿದ್ದಾರೆ. </p>.<h2>ದೋಣಿ ಮುಳುಗಿ 40 ಮಂದಿ ಜಲ ಸಮಾಧಿ</h2>.<p><strong>ಗುವಾಹಟಿ, ಅ. 27 (ಪಿಟಿಐ, ಯುಎನ್ಐ)</strong>– ಬ್ರಹ್ಮಪುತ್ರ ನದಿಯಲ್ಲಿ ದೋಣಿಯೊಂದು ಮುಳುಗಿ ಸುಮಾರು 40 ಮಂದಿ ಜಲ ಸಮಾಧಿಯಾಗಿದ್ದಾರೆ ಎಂದು ಶಂಕಿಸಲಾದ ದುರ್ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.</p>.<p>ಸುಮಾರು 50 ಜನ ಪ್ರಯಾಣಿಸುತ್ತಿದ್ದ ಯಾಂತ್ರಿಕ ದೋಣಿಯೊಂದು ಸುಕಲೇಶ್ವರ ಘಾಟ್ ಸಮೀಪ ನದಿಯ ಮಧ್ಯ ಭಾಗದಲ್ಲಿದ್ದಾಗ ಮತ್ತೊಂದು ದೋಣಿಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>