ಭಿನ್ನಮತೀಯರು ನಾಯಕತ್ವ ಬದಲಾವಣೆಯಾಗಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ನಂತರ ಅದಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸಿದ ಮುಖ್ಯಮಂತ್ರಿಯಗಳು, ಈಗಾಗಲೇ ನಿಗದಿಪಡಿಸಿರುವಂತೆ ವಿಧಾನಸಭೆ ಅಧಿವೇಶನ 29ರಂದು ಪ್ರಾರಂಭವಾಗುತ್ತದೆ. ಆ ಸಂದರ್ಭದಲ್ಲಿ ಮಹತ್ತರವಾದ ವಿಷಯಗಳು ಚರ್ಚೆಗೆ ಬರದೆ ಇರುವ ದಿನ ಶಾಸಕಾಂಗ ಪಕ್ಷದ ಸಭೆ ನಡೆಸಬಹುದಾಗಿದೆ ಎಂದು ಅವರು ಭೇಟಿ ಮಾಡಿದ ವರದಿಗಾರರಿಗೆ ತಿಳಿಸಿದರು.