ಭಾನುವಾರ, ಏಪ್ರಿಲ್ 2, 2023
32 °C

25 ವರ್ಷಗಳ ಹಿಂದೆ: ಸೋಮವಾರ, ಜನವರಿ 12, 1998

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಚ್ಛಿದ್ರ ಶಕ್ತಿಗಳ ನಿಗ್ರಹಕ್ಕೆ ಕರೆ; ಸೋನಿಯಾ ಪ್ರಚಾರ ಆರಂಭ
ಶ್ರೀಪೆರಂಬುದೂರು, ಜನವರಿ 11–
ಜಾತಿ, ಮತ, ಧರ್ಮ, ಪ್ರಾಂತ್ಯದ ಹೆಸರಿನಲ್ಲಿ ಸಮಾಜವನ್ನು ಛಿದ್ರಗೊಳಿಸುತ್ತಿರುವ ಶಕ್ತಿಗಳನ್ನು ನಿಗ್ರಹಿಸುವುದು ಕಾಂಗ್ರೆಸ್‌ ಪಕ್ಷಕ್ಕೆ ಸವಾಲು ಆಗಿದೆ ಎಂದು ಸೋನಿಯಾ ಗಾಂಧಿಯವರು ಇಂದು ಇಲ್ಲಿ ಪರೋಕ್ಷವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

‘ವಿಚ್ಛಿದ್ರಕಾರಿ ಶಕ್ತಿಗಳ ಕೈಗೆ ಅಧಿಕಾರ ಹೋಗದಂತೆ ತಡೆಯಬೇಕು; ಇದು ಕಾಂಗ್ರೆಸ್‌ಗೆ ಮಾತ್ರ ಸಾಧ್ಯ’ ಎಂದರು.

ಆರು ವರ್ಷಗಳ ಹಿಂದೆ ತಮ್ಮ ಪತಿ ಹತ್ಯೆಯಾದ ಶ್ರೀಪೆರಂಬುದೂರಿನಲ್ಲಿ ರಾಜೀವ್‌ ಗಾಂಧಿ ಸ್ಮಾರಕಕ್ಕೆ ಶ್ರದ್ಧಾಂಜಲಿ ಅರ್ಪಿಸಿದರು. ಇಲ್ಲಿಂದ ಒಂದು ಕಿ.ಮೀ. ದೂರದಲ್ಲಿ ವಿಶೇಷವಾಗಿ ಸಿದ್ಧಪಡಿಸಿದ್ದ ‘ಮಲ್ಲಿಗೆ ಮಂಟಪ’ದ ವೇದಿಕೆಯಿಂದ ಭಾರಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ತಮ್ಮ ಚೊಚ್ಚಲ ರಾಜಕೀಯ ಭಾಷಣ ಮಾಡಿದರು.

‘ಪಕ್ಷದ ಅಧ್ಯಕ್ಷತೆ ಸದ್ಯಕ್ಕೆ ಬೇಡ’
ನವದೆಹಲಿ, ಜನವರಿ 11 (ಪಿಟಿಐ)–
ಸದ್ಯಕ್ಕೆ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳುವುದಿಲ್ಲ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು