ಮಹಾರಾಷ್ಟ್ರದಲ್ಲಿ ಬಿಜೆಪಿ ಮೃತ್ರಿಕೂಟದ ಸವಾಲನ್ನು ಎದುರಿಸಿ ಪಕ್ಷಕ್ಕೆ ಗೆಲುವು ತಂದುಕೊಟ್ಟ ಶರದ್ ಪವಾರ್ ಅವರಿಗೆ ನಾಯಕತ್ವ ನೀಡಬೇಕು ಎಂದು ಪವಾರ್ ಪರ ಬಣ ಒತ್ತಾಯಿಸಿದರೆ, ಪಕ್ಷದ ಹಿತದ ದೃಷ್ಟಿಯಿಂದ ಸೋನಿಯಾ ಗಾಂಧಿ ಅವರೇ ನಾಯಕತ್ವ ವಹಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಕೆ.ವಿಜಯಭಾಸ್ಕರ ರೆಡ್ಡಿ ಅವರು ಹೇಳಿದ್ದಾರೆ. ಇನ್ನೊಂದು ಗುಂಪಿನ ಪ್ರಕಾರ ನಾಯಕತ್ವವನ್ನು ಉತ್ತರ ಭಾರತದವರಿಗೇ ವಹಿಸಿಕೊಡಬೇಕು ಎಂದು ಆಗ್ರಹಿಸಲಾಗಿದೆ.