<p><strong>ಪಟ್ನಾ, ಮಾರ್ಚ್ 10–</strong> ವಿಧಾನಸಭೆಯಲ್ಲಿ ವಿಶ್ವಾಸಮತ ಎದುರಿಸದೆಯೇ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂದು ರಾಜೀನಾಮೆ ನೀಡಿದರು.</p><p>ಇದರೊಂದಿಗೆ, ಬಿಹಾರವನ್ನು 10 ವರ್ಷಗಳ ಕಾಲ ಆಳಿದ ಲಾಲೂ ಪ್ರಸಾದ್ ಅವರ ನಾಯಕತ್ವದ ಪಕ್ಷ ಮೂರನೇ ಬಾರಿಗೆ ಈ ರಾಜ್ಯದ ಚುಕ್ಕಾಣಿ ಹಿಡಿಯುವಂತೆ ಆಗಿದೆ. ಮುಂದಿನ ಸರ್ಕಾರ ರಚನೆಯಾಗುವವರೆಗೆ ಅಧಿಕಾರದಲ್ಲಿ ಮುಂದುವರಿಯಲು ನಿತೀಶ್ ಕುಮಾರ್ ಅವರಿಗೆ ಸೂಚಿಸಲಾಗಿದೆ.</p><p>ಸೋಲು ಕಟ್ಟಿಟ್ಟದ್ದು ಎಂಬುದು ಖಚಿತವಾಗಿರುವುದರಿಂದಲೇ ನಿತೀಶ್ ಅವರು ವಿಶ್ವಾಸಮತ ಗೊತ್ತುವಳಿ ಮೇಲಿನ ಚರ್ಚೆಗೆ ಉತ್ತರ ನೀಡಿದರೂ, ಮತದಾನಕ್ಕೆ ಕಾಯದೆ ತಮ್ಮ ಭಾಷಣದಲ್ಲಿ ಆರ್ಜೆಡಿ ಹಾಗೂ ಕಾಂಗ್ರೆಸ್ ಪಕ್ಷಗಳನ್ನು ಟೀಕಿಸಿ, ತಾವು ರಾಜೀನಾಮೆ ಸಲ್ಲಿಸಲು ರಾಜಭವನಕ್ಕೆ ಹೋಗುತ್ತಿರುವುದಾಗಿ ಪ್ರಕಟಿಸಿದರು.</p><p><strong>ಕೃಷ್ಣ ದಿಢೀರ್ ದೆಹಲಿಗೆ: ಭೇಟಿ ಗೋಪ್ಯ</strong></p><p><strong>ನವದೆಹಲಿ, ಮಾರ್ಚ್ 10–</strong> ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗಾಗಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಡನೆ ಚರ್ಚಿಸಲು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಇಂದು ರಾತ್ರಿ ದೆಹಲಿಗೆ ದಿಢೀರನೆ ಆಗಮಿಸಿದರು.</p><p>ಆದರೆ ಅವರು ತಮ್ಮ ಈ ಭೇಟಿಯನ್ನು ಗೋಪ್ಯವಾಗಿಟ್ಟಿದ್ದಾರೆ. ದೆಹಲಿಗೆ ಆಗಮಿಸಿರುವ ಮುಖ್ಯಮಂತ್ರಿ ಕರ್ನಾಟಕ ಭವನದಲ್ಲಿ ಉಳಿದುಕೊಂಡಿಲ್ಲ. ಅವರು ಎಲ್ಲಿ ಉಳಿದು ಕೊಂಡಿದ್ದಾರೆಂಬ ಬಗ್ಗೆ ತಮಗೆ ಮಾಹಿತಿ ಇಲ್ಲವೆಂದು ಇಲ್ಲಿನ ಕರ್ನಾಟಕ ಭವನದ ಮತ್ತು ಮುಖ್ಯಮಂತ್ರಿ ಅವರ ಬೆಂಗಳೂರು ಕಾರ್ಯಾಲಯದ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ, ಮಾರ್ಚ್ 10–</strong> ವಿಧಾನಸಭೆಯಲ್ಲಿ ವಿಶ್ವಾಸಮತ ಎದುರಿಸದೆಯೇ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂದು ರಾಜೀನಾಮೆ ನೀಡಿದರು.</p><p>ಇದರೊಂದಿಗೆ, ಬಿಹಾರವನ್ನು 10 ವರ್ಷಗಳ ಕಾಲ ಆಳಿದ ಲಾಲೂ ಪ್ರಸಾದ್ ಅವರ ನಾಯಕತ್ವದ ಪಕ್ಷ ಮೂರನೇ ಬಾರಿಗೆ ಈ ರಾಜ್ಯದ ಚುಕ್ಕಾಣಿ ಹಿಡಿಯುವಂತೆ ಆಗಿದೆ. ಮುಂದಿನ ಸರ್ಕಾರ ರಚನೆಯಾಗುವವರೆಗೆ ಅಧಿಕಾರದಲ್ಲಿ ಮುಂದುವರಿಯಲು ನಿತೀಶ್ ಕುಮಾರ್ ಅವರಿಗೆ ಸೂಚಿಸಲಾಗಿದೆ.</p><p>ಸೋಲು ಕಟ್ಟಿಟ್ಟದ್ದು ಎಂಬುದು ಖಚಿತವಾಗಿರುವುದರಿಂದಲೇ ನಿತೀಶ್ ಅವರು ವಿಶ್ವಾಸಮತ ಗೊತ್ತುವಳಿ ಮೇಲಿನ ಚರ್ಚೆಗೆ ಉತ್ತರ ನೀಡಿದರೂ, ಮತದಾನಕ್ಕೆ ಕಾಯದೆ ತಮ್ಮ ಭಾಷಣದಲ್ಲಿ ಆರ್ಜೆಡಿ ಹಾಗೂ ಕಾಂಗ್ರೆಸ್ ಪಕ್ಷಗಳನ್ನು ಟೀಕಿಸಿ, ತಾವು ರಾಜೀನಾಮೆ ಸಲ್ಲಿಸಲು ರಾಜಭವನಕ್ಕೆ ಹೋಗುತ್ತಿರುವುದಾಗಿ ಪ್ರಕಟಿಸಿದರು.</p><p><strong>ಕೃಷ್ಣ ದಿಢೀರ್ ದೆಹಲಿಗೆ: ಭೇಟಿ ಗೋಪ್ಯ</strong></p><p><strong>ನವದೆಹಲಿ, ಮಾರ್ಚ್ 10–</strong> ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗಾಗಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಡನೆ ಚರ್ಚಿಸಲು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಇಂದು ರಾತ್ರಿ ದೆಹಲಿಗೆ ದಿಢೀರನೆ ಆಗಮಿಸಿದರು.</p><p>ಆದರೆ ಅವರು ತಮ್ಮ ಈ ಭೇಟಿಯನ್ನು ಗೋಪ್ಯವಾಗಿಟ್ಟಿದ್ದಾರೆ. ದೆಹಲಿಗೆ ಆಗಮಿಸಿರುವ ಮುಖ್ಯಮಂತ್ರಿ ಕರ್ನಾಟಕ ಭವನದಲ್ಲಿ ಉಳಿದುಕೊಂಡಿಲ್ಲ. ಅವರು ಎಲ್ಲಿ ಉಳಿದು ಕೊಂಡಿದ್ದಾರೆಂಬ ಬಗ್ಗೆ ತಮಗೆ ಮಾಹಿತಿ ಇಲ್ಲವೆಂದು ಇಲ್ಲಿನ ಕರ್ನಾಟಕ ಭವನದ ಮತ್ತು ಮುಖ್ಯಮಂತ್ರಿ ಅವರ ಬೆಂಗಳೂರು ಕಾರ್ಯಾಲಯದ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>