<p><strong>ಕೇಪ್ಟೌನ್, ಏ.12 (ರಾಯಿಟರ್ಸ್)–</strong> ಹ್ಯಾನ್ಸಿ ಕ್ರೊನಿಯೆ ಅವರ ವಿರುದ್ಧ ಹೂಡಲಾದ ‘ಮೋಸದಾಟ’ ಹಾಗೂ ಬಾಜಿ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಅವರನ್ನು ಭಾರತದ ವಶಕ್ಕೆ ಒಪ್ಪಿಸುವ ಬಗ್ಗೆ ನಿರ್ಣಯವನ್ನು ದಕ್ಷಿಣ ಆಫ್ರಿಕಾ ದೇಶದ ಅಧ್ಯಕ್ಷ ಥಾಬೊ ಮೆಬಿಕಿ ಅವರಿಗೆ ಬಿಡಲಾಗಿದೆ ಎಂದು ವಿದೇಶಾಂಗ ಖಾತೆಯ ಮೂಲಗಳು ತಿಳಿಸಿವೆ. </p><p>ಆದರೆ ತನಿಖೆ ನಡೆಸಲು ಸ್ವತಂತ್ರ ಸಮಿತಿ ರಚಿಸುವ ಮೊದಲು ಅವರನ್ನು ಭಾರತದ ವಶಕ್ಕೆ ಒಪ್ಪಿಸುವುದಿಲ್ಲ ಎಂದು ವಿದೇಶಾಂಗ ಖಾತೆಯ ಸಹಾಯಕ ಸಚಿವ ಅಜೀಜ್ ಪಹಾಡ್ ಅವರು ಹೇಳಿದ್ದಾರೆ.</p><p>ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪ್ರಕರಣದ ಪೂರ್ಣ ಮಾಹಿತಿ ದೊರೆಯುವವರೆಗೆ ನಾನು ಏನನ್ನೂ ಊಹಿಸಲು ಸಾಧ್ಯವಿಲ್ಲ. ಭಾರತದೊಂದಿಗೆ ದಕ್ಷಿಣ ಆಫ್ರಿಕಾ ಉತ್ತಮ ಸಂಬಂಧ ಹೊಂದಿದೆ. ಅದನ್ನು ಮುಂದುವರಿಸಿಕೊಂಡು ಹೋಗಬೇಕು ಎನ್ನುವುದು ಸರ್ಕಾರದ ಉದ್ದೇಶ’ ಎಂದು ಹೇಳಿದರು. </p><p>ಈ ಮಧ್ಯೆ ಪ್ರಕರಣದ ತನಿಖೆ ಮಾಡಲು ನ್ಯಾಯಾಂಗ ಆಯೋಗವನ್ನು ಶೀಘ್ರವಾಗಿ ರಚಿಸಲಾಗುವುದು ಎಂದು ಕ್ರೀಡಾ ಸಚಿವಾಲಯದ ವಕ್ತಾರ ಗ್ರಹಾಂ ಅಬ್ರಹಾಂಸ್ ಅವರು ತಿಳಿಸಿದ್ದಾರೆ. </p><p>ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಪ್ರಸ್ತಾಪಗೊಂಡಿದ್ದು ಇದನ್ನು ಒಂದು ರಾಷ್ಟ್ರೀಯ ಸಂಕಟ ಎಂದು ಪರಿಗಣಿಸಿ ಮರುಕ ಪಟ್ಟುಕೊಳ್ಳುತ್ತಾ ಕೂರಬಾರದು ಎಂದು ಸರ್ಕಾರ ಜನರಿಗೆ ಮನವಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೇಪ್ಟೌನ್, ಏ.12 (ರಾಯಿಟರ್ಸ್)–</strong> ಹ್ಯಾನ್ಸಿ ಕ್ರೊನಿಯೆ ಅವರ ವಿರುದ್ಧ ಹೂಡಲಾದ ‘ಮೋಸದಾಟ’ ಹಾಗೂ ಬಾಜಿ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಅವರನ್ನು ಭಾರತದ ವಶಕ್ಕೆ ಒಪ್ಪಿಸುವ ಬಗ್ಗೆ ನಿರ್ಣಯವನ್ನು ದಕ್ಷಿಣ ಆಫ್ರಿಕಾ ದೇಶದ ಅಧ್ಯಕ್ಷ ಥಾಬೊ ಮೆಬಿಕಿ ಅವರಿಗೆ ಬಿಡಲಾಗಿದೆ ಎಂದು ವಿದೇಶಾಂಗ ಖಾತೆಯ ಮೂಲಗಳು ತಿಳಿಸಿವೆ. </p><p>ಆದರೆ ತನಿಖೆ ನಡೆಸಲು ಸ್ವತಂತ್ರ ಸಮಿತಿ ರಚಿಸುವ ಮೊದಲು ಅವರನ್ನು ಭಾರತದ ವಶಕ್ಕೆ ಒಪ್ಪಿಸುವುದಿಲ್ಲ ಎಂದು ವಿದೇಶಾಂಗ ಖಾತೆಯ ಸಹಾಯಕ ಸಚಿವ ಅಜೀಜ್ ಪಹಾಡ್ ಅವರು ಹೇಳಿದ್ದಾರೆ.</p><p>ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪ್ರಕರಣದ ಪೂರ್ಣ ಮಾಹಿತಿ ದೊರೆಯುವವರೆಗೆ ನಾನು ಏನನ್ನೂ ಊಹಿಸಲು ಸಾಧ್ಯವಿಲ್ಲ. ಭಾರತದೊಂದಿಗೆ ದಕ್ಷಿಣ ಆಫ್ರಿಕಾ ಉತ್ತಮ ಸಂಬಂಧ ಹೊಂದಿದೆ. ಅದನ್ನು ಮುಂದುವರಿಸಿಕೊಂಡು ಹೋಗಬೇಕು ಎನ್ನುವುದು ಸರ್ಕಾರದ ಉದ್ದೇಶ’ ಎಂದು ಹೇಳಿದರು. </p><p>ಈ ಮಧ್ಯೆ ಪ್ರಕರಣದ ತನಿಖೆ ಮಾಡಲು ನ್ಯಾಯಾಂಗ ಆಯೋಗವನ್ನು ಶೀಘ್ರವಾಗಿ ರಚಿಸಲಾಗುವುದು ಎಂದು ಕ್ರೀಡಾ ಸಚಿವಾಲಯದ ವಕ್ತಾರ ಗ್ರಹಾಂ ಅಬ್ರಹಾಂಸ್ ಅವರು ತಿಳಿಸಿದ್ದಾರೆ. </p><p>ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಪ್ರಸ್ತಾಪಗೊಂಡಿದ್ದು ಇದನ್ನು ಒಂದು ರಾಷ್ಟ್ರೀಯ ಸಂಕಟ ಎಂದು ಪರಿಗಣಿಸಿ ಮರುಕ ಪಟ್ಟುಕೊಳ್ಳುತ್ತಾ ಕೂರಬಾರದು ಎಂದು ಸರ್ಕಾರ ಜನರಿಗೆ ಮನವಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>