<p><strong>ಬೆಂಗಳೂರು, ಜೂನ್ 5–</strong> ‘ಶೀಘ್ರವೇ ರಾಜ್ಯದಲ್ಲಿ ಕುಡಿಯುವ ನೀರಿನ ಪೂರೈಕೆ ಹಾಗೂ ನಿರ್ವಹಣೆಯನ್ನು ಖಾಸಗೀಕರಿಸಲಾಗುವುದು’ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಇಂದು ಇಲ್ಲಿ ಪ್ರಕಟಿಸಿದರು.</p><p>ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ವಿಶ್ವ ಹೂಡಿಕೆದಾರರ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿ, ‘ವಿದ್ಯುತ್ ಉತ್ಪಾದನೆ ಮತ್ತು ಪೂರೈಕೆಯನ್ನು ಖಾಸಗೀಕರಿಸುವ ಪ್ರಕ್ರಿಯೆ ರಾಜ್ಯದಲ್ಲಿ ಭರದಿಂದ ನಡೆದಿದೆ. ಎರಡನೆಯ ಹಂತವಾಗಿ ನೀರಿನ ಪೂರೈಕೆ ಹಾಗೂ ನಿರ್ವಹಣೆಯನ್ನು ಖಾಸಗಿಯವರಿಗೆ ವಹಿಸಿಕೊಡಲಾಗುವುದು. ಈ ಕೆಲಸವನ್ನು ಬೆಂಗಳೂರಿನಿಂದ ಆರಂಭಿಸಿ ಮೈಸೂರು, ಹುಬ್ಬಳ್ಳಿ ಮುಂತಾಗಿ ಜಿಲ್ಲಾ ಕೇಂದ್ರಗಳಿಗೆ ವಿಸ್ತರಿಸಲಾಗುವುದು’ ಎಂದು ಪ್ರಕಟಿಸಿದರು.</p><p><strong>ಪಂಚಾಯಿತಿ ಚುನಾವಣೆ ಇಂದು ಮುಕ್ತಾಯ</strong></p><p><strong>ಬೆಂಗಳೂರು, ಜೂನ್ 5–</strong> ರಾಜ್ಯದಲ್ಲಿ ನಾಳೆ ಉಳಿದ 11 ಜಿಲ್ಲಾ ಪಂಚಾಯಿತಿ ಮತ್ತು 76 ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದ್ದು, ರಾಜ್ಯ ಚುನಾವಣಾ ಆಯೋಗವು ಸುಸೂತ್ರ ಮತದಾನಕ್ಕೆ ಸಕಲ ವ್ಯವಸ್ಥೆ ಮಾಡಿದೆ.</p><p>ರಾಜ್ಯದ ಪೂರ್ವ ಮತ್ತು ಮಧ್ಯ ಭಾಗದಲ್ಲಿನ ಕಲ್ಬುರ್ಗಿ, ವಿಜಾಪುರ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಈ ಚುನಾವಣೆ ನಡೆಯಲಿದ್ದು ನಿನ್ನೆ ಸಂಜೆ ಚುನಾವಣಾ ಪ್ರಚಾರ ಅಂತ್ಯಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು, ಜೂನ್ 5–</strong> ‘ಶೀಘ್ರವೇ ರಾಜ್ಯದಲ್ಲಿ ಕುಡಿಯುವ ನೀರಿನ ಪೂರೈಕೆ ಹಾಗೂ ನಿರ್ವಹಣೆಯನ್ನು ಖಾಸಗೀಕರಿಸಲಾಗುವುದು’ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಇಂದು ಇಲ್ಲಿ ಪ್ರಕಟಿಸಿದರು.</p><p>ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ವಿಶ್ವ ಹೂಡಿಕೆದಾರರ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿ, ‘ವಿದ್ಯುತ್ ಉತ್ಪಾದನೆ ಮತ್ತು ಪೂರೈಕೆಯನ್ನು ಖಾಸಗೀಕರಿಸುವ ಪ್ರಕ್ರಿಯೆ ರಾಜ್ಯದಲ್ಲಿ ಭರದಿಂದ ನಡೆದಿದೆ. ಎರಡನೆಯ ಹಂತವಾಗಿ ನೀರಿನ ಪೂರೈಕೆ ಹಾಗೂ ನಿರ್ವಹಣೆಯನ್ನು ಖಾಸಗಿಯವರಿಗೆ ವಹಿಸಿಕೊಡಲಾಗುವುದು. ಈ ಕೆಲಸವನ್ನು ಬೆಂಗಳೂರಿನಿಂದ ಆರಂಭಿಸಿ ಮೈಸೂರು, ಹುಬ್ಬಳ್ಳಿ ಮುಂತಾಗಿ ಜಿಲ್ಲಾ ಕೇಂದ್ರಗಳಿಗೆ ವಿಸ್ತರಿಸಲಾಗುವುದು’ ಎಂದು ಪ್ರಕಟಿಸಿದರು.</p><p><strong>ಪಂಚಾಯಿತಿ ಚುನಾವಣೆ ಇಂದು ಮುಕ್ತಾಯ</strong></p><p><strong>ಬೆಂಗಳೂರು, ಜೂನ್ 5–</strong> ರಾಜ್ಯದಲ್ಲಿ ನಾಳೆ ಉಳಿದ 11 ಜಿಲ್ಲಾ ಪಂಚಾಯಿತಿ ಮತ್ತು 76 ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದ್ದು, ರಾಜ್ಯ ಚುನಾವಣಾ ಆಯೋಗವು ಸುಸೂತ್ರ ಮತದಾನಕ್ಕೆ ಸಕಲ ವ್ಯವಸ್ಥೆ ಮಾಡಿದೆ.</p><p>ರಾಜ್ಯದ ಪೂರ್ವ ಮತ್ತು ಮಧ್ಯ ಭಾಗದಲ್ಲಿನ ಕಲ್ಬುರ್ಗಿ, ವಿಜಾಪುರ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಈ ಚುನಾವಣೆ ನಡೆಯಲಿದ್ದು ನಿನ್ನೆ ಸಂಜೆ ಚುನಾವಣಾ ಪ್ರಚಾರ ಅಂತ್ಯಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>