<p><strong>ವಿಚ್ಛಿದ್ರ ಶಕ್ತಿಗಳ ನಿಗ್ರಹಕ್ಕೆ ಕರೆ; ಸೋನಿಯಾ ಪ್ರಚಾರ ಆರಂಭ<br />ಶ್ರೀಪೆರಂಬುದೂರು, ಜನವರಿ 11–</strong> ಜಾತಿ, ಮತ, ಧರ್ಮ, ಪ್ರಾಂತ್ಯದ ಹೆಸರಿನಲ್ಲಿ ಸಮಾಜವನ್ನು ಛಿದ್ರಗೊಳಿಸುತ್ತಿರುವ ಶಕ್ತಿಗಳನ್ನು ನಿಗ್ರಹಿಸುವುದು ಕಾಂಗ್ರೆಸ್ ಪಕ್ಷಕ್ಕೆ ಸವಾಲು ಆಗಿದೆ ಎಂದು ಸೋನಿಯಾ ಗಾಂಧಿಯವರು ಇಂದು ಇಲ್ಲಿ ಪರೋಕ್ಷವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>‘ವಿಚ್ಛಿದ್ರಕಾರಿ ಶಕ್ತಿಗಳ ಕೈಗೆ ಅಧಿಕಾರ ಹೋಗದಂತೆ ತಡೆಯಬೇಕು; ಇದು ಕಾಂಗ್ರೆಸ್ಗೆ ಮಾತ್ರ ಸಾಧ್ಯ’ ಎಂದರು.</p>.<p>ಆರು ವರ್ಷಗಳ ಹಿಂದೆ ತಮ್ಮ ಪತಿ ಹತ್ಯೆಯಾದ ಶ್ರೀಪೆರಂಬುದೂರಿನಲ್ಲಿ ರಾಜೀವ್ ಗಾಂಧಿ ಸ್ಮಾರಕಕ್ಕೆ ಶ್ರದ್ಧಾಂಜಲಿ ಅರ್ಪಿಸಿದರು. ಇಲ್ಲಿಂದ ಒಂದು ಕಿ.ಮೀ. ದೂರದಲ್ಲಿ ವಿಶೇಷವಾಗಿ ಸಿದ್ಧಪಡಿಸಿದ್ದ ‘ಮಲ್ಲಿಗೆ ಮಂಟಪ’ದ ವೇದಿಕೆಯಿಂದ ಭಾರಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ತಮ್ಮ ಚೊಚ್ಚಲ ರಾಜಕೀಯ ಭಾಷಣ ಮಾಡಿದರು.</p>.<p><strong>‘ಪಕ್ಷದ ಅಧ್ಯಕ್ಷತೆ ಸದ್ಯಕ್ಕೆ ಬೇಡ’<br />ನವದೆಹಲಿ, ಜನವರಿ 11 (ಪಿಟಿಐ)– </strong>ಸದ್ಯಕ್ಕೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳುವುದಿಲ್ಲ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಚ್ಛಿದ್ರ ಶಕ್ತಿಗಳ ನಿಗ್ರಹಕ್ಕೆ ಕರೆ; ಸೋನಿಯಾ ಪ್ರಚಾರ ಆರಂಭ<br />ಶ್ರೀಪೆರಂಬುದೂರು, ಜನವರಿ 11–</strong> ಜಾತಿ, ಮತ, ಧರ್ಮ, ಪ್ರಾಂತ್ಯದ ಹೆಸರಿನಲ್ಲಿ ಸಮಾಜವನ್ನು ಛಿದ್ರಗೊಳಿಸುತ್ತಿರುವ ಶಕ್ತಿಗಳನ್ನು ನಿಗ್ರಹಿಸುವುದು ಕಾಂಗ್ರೆಸ್ ಪಕ್ಷಕ್ಕೆ ಸವಾಲು ಆಗಿದೆ ಎಂದು ಸೋನಿಯಾ ಗಾಂಧಿಯವರು ಇಂದು ಇಲ್ಲಿ ಪರೋಕ್ಷವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>‘ವಿಚ್ಛಿದ್ರಕಾರಿ ಶಕ್ತಿಗಳ ಕೈಗೆ ಅಧಿಕಾರ ಹೋಗದಂತೆ ತಡೆಯಬೇಕು; ಇದು ಕಾಂಗ್ರೆಸ್ಗೆ ಮಾತ್ರ ಸಾಧ್ಯ’ ಎಂದರು.</p>.<p>ಆರು ವರ್ಷಗಳ ಹಿಂದೆ ತಮ್ಮ ಪತಿ ಹತ್ಯೆಯಾದ ಶ್ರೀಪೆರಂಬುದೂರಿನಲ್ಲಿ ರಾಜೀವ್ ಗಾಂಧಿ ಸ್ಮಾರಕಕ್ಕೆ ಶ್ರದ್ಧಾಂಜಲಿ ಅರ್ಪಿಸಿದರು. ಇಲ್ಲಿಂದ ಒಂದು ಕಿ.ಮೀ. ದೂರದಲ್ಲಿ ವಿಶೇಷವಾಗಿ ಸಿದ್ಧಪಡಿಸಿದ್ದ ‘ಮಲ್ಲಿಗೆ ಮಂಟಪ’ದ ವೇದಿಕೆಯಿಂದ ಭಾರಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ತಮ್ಮ ಚೊಚ್ಚಲ ರಾಜಕೀಯ ಭಾಷಣ ಮಾಡಿದರು.</p>.<p><strong>‘ಪಕ್ಷದ ಅಧ್ಯಕ್ಷತೆ ಸದ್ಯಕ್ಕೆ ಬೇಡ’<br />ನವದೆಹಲಿ, ಜನವರಿ 11 (ಪಿಟಿಐ)– </strong>ಸದ್ಯಕ್ಕೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳುವುದಿಲ್ಲ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>