<p><strong>ಬಿಹಾರದಲ್ಲಿ ಮರುಕಳಿಸಿದ ಹತ್ಯಾಕಾಂಡ– 9 ಸಾವು<br />ಜೆಹನಾಬಾದ್ (ಬಿಹಾರ), ಜ. 10 (ಪಿಟಿಐ): </strong>ಲಕ್ಷ್ಮಣಪುರದಲ್ಲಿ ಈಚೆಗೆ ನಡೆದ ಸಾಮೂಹಿಕ ಹತ್ಯೆಯ ಹಿನ್ನೆಲೆಯಲ್ಲಿ ನಕ್ಸಲೀಯ ಸಂಘಟನೆಗೆ ಸೇರಿದ ಸಿಪಿಎಂಎಲ್ ಕಾರ್ಯಕರ್ತರು ಜೆಹನಾಬಾದ್ ಜಿಲ್ಲೆಯ ರಾಂ ಪುರಾಚುರನ್ ಗ್ರಾಮದಲ್ಲಿ ಶುಕ್ರವಾರ ರಾತ್ರಿ 9 ಮಂದಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.</p>.<p><strong>ಸೋನಿಯಾ ದರ್ಶನಕ್ಕೆ ನೂಕು ನುಗ್ಗಲು<br />ನವದೆಹಲಿ, ಜ. 10– </strong> ಜನ ಮರುಳೋ, ಜಾತ್ರೆ ಮರುಳೋ ಎನ್ನುವ ನಾಣ್ಣುಡಿಯಂತೆ ಸೋನಿಯಾ ಗಾಂಧಿ ಅವರ ‘ಧರ್ಮ ದರ್ಶನ’ ಪಡೆಯಲು ಜನಜಾತ್ರೆ ನೂಕು ನುಗ್ಗಲು.</p>.<p>ಕಳೆದ ಮೂರ್ನಾಲ್ಕು ದಿನಗಳಿಂದ ಸೋನಿಯಾ ಗಾಂಧಿ ಅವರು ನಂ.10 ಜನಪತ್ ನ ತಮ್ಮ ಬಂಗಲೆಯ ಆವರಣದಲ್ಲಿ ತಮ್ಮನ್ನು ಪ್ರೀತಿ ವಿಶ್ವಾಸಗಳಿಂದ ಕಾಣಲು, ಅಭಿನಂದಿಸಲು ಬರುವ ಮಂದಿಗೆ ವಿಶೇಷವಾಗಿ ಕಾಂಗ್ರೆಸ್ ಕಾರ್ಯಕರ್ತರಿಗೆ ‘ಧರ್ಮ ದರ್ಶನ’ ವ್ಯವಸ್ಥೆ ಮಾಡಿದ್ದಾರೆ.</p>.<p>ಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಪ್ರಚಾರ ಆರಂಭಿಸಲು ತಮ್ಮ ನಿರ್ಧಾರವನ್ನು ಪ್ರಕಟಿಸಿದ ಮೇಲೆ ಅವರ ನಿವಾಸ ಮತ್ತು ಪಕ್ಕದಲ್ಲಿಯೇ ಇರುವ ಅಕ್ಬರ್ ರಸ್ತೆಯ ಕಾಂಗ್ರೆಸ್ ಕಾರ್ಯಾಲಯ ಬಿಡುವಿಲ್ಲದ ಚಟುವಟಿಕೆಗಳ ತಾಣವಾಗಿ ಪರಿವರ್ತನೆಗೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಹಾರದಲ್ಲಿ ಮರುಕಳಿಸಿದ ಹತ್ಯಾಕಾಂಡ– 9 ಸಾವು<br />ಜೆಹನಾಬಾದ್ (ಬಿಹಾರ), ಜ. 10 (ಪಿಟಿಐ): </strong>ಲಕ್ಷ್ಮಣಪುರದಲ್ಲಿ ಈಚೆಗೆ ನಡೆದ ಸಾಮೂಹಿಕ ಹತ್ಯೆಯ ಹಿನ್ನೆಲೆಯಲ್ಲಿ ನಕ್ಸಲೀಯ ಸಂಘಟನೆಗೆ ಸೇರಿದ ಸಿಪಿಎಂಎಲ್ ಕಾರ್ಯಕರ್ತರು ಜೆಹನಾಬಾದ್ ಜಿಲ್ಲೆಯ ರಾಂ ಪುರಾಚುರನ್ ಗ್ರಾಮದಲ್ಲಿ ಶುಕ್ರವಾರ ರಾತ್ರಿ 9 ಮಂದಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.</p>.<p><strong>ಸೋನಿಯಾ ದರ್ಶನಕ್ಕೆ ನೂಕು ನುಗ್ಗಲು<br />ನವದೆಹಲಿ, ಜ. 10– </strong> ಜನ ಮರುಳೋ, ಜಾತ್ರೆ ಮರುಳೋ ಎನ್ನುವ ನಾಣ್ಣುಡಿಯಂತೆ ಸೋನಿಯಾ ಗಾಂಧಿ ಅವರ ‘ಧರ್ಮ ದರ್ಶನ’ ಪಡೆಯಲು ಜನಜಾತ್ರೆ ನೂಕು ನುಗ್ಗಲು.</p>.<p>ಕಳೆದ ಮೂರ್ನಾಲ್ಕು ದಿನಗಳಿಂದ ಸೋನಿಯಾ ಗಾಂಧಿ ಅವರು ನಂ.10 ಜನಪತ್ ನ ತಮ್ಮ ಬಂಗಲೆಯ ಆವರಣದಲ್ಲಿ ತಮ್ಮನ್ನು ಪ್ರೀತಿ ವಿಶ್ವಾಸಗಳಿಂದ ಕಾಣಲು, ಅಭಿನಂದಿಸಲು ಬರುವ ಮಂದಿಗೆ ವಿಶೇಷವಾಗಿ ಕಾಂಗ್ರೆಸ್ ಕಾರ್ಯಕರ್ತರಿಗೆ ‘ಧರ್ಮ ದರ್ಶನ’ ವ್ಯವಸ್ಥೆ ಮಾಡಿದ್ದಾರೆ.</p>.<p>ಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಪ್ರಚಾರ ಆರಂಭಿಸಲು ತಮ್ಮ ನಿರ್ಧಾರವನ್ನು ಪ್ರಕಟಿಸಿದ ಮೇಲೆ ಅವರ ನಿವಾಸ ಮತ್ತು ಪಕ್ಕದಲ್ಲಿಯೇ ಇರುವ ಅಕ್ಬರ್ ರಸ್ತೆಯ ಕಾಂಗ್ರೆಸ್ ಕಾರ್ಯಾಲಯ ಬಿಡುವಿಲ್ಲದ ಚಟುವಟಿಕೆಗಳ ತಾಣವಾಗಿ ಪರಿವರ್ತನೆಗೊಂಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>