ಬೆಂಗಳೂರು ಉತ್ತರ, ಕೆನರಾ, ಬಳ್ಳಾರಿ ಅಭ್ಯರ್ಥಿ ಬದಲು
ನವದೆಹಲಿ. ಏ. 5– ಕರ್ನಾಟಕದ ವಿವಿಧ ಲೋಕಸಭಾ ಕ್ಷೇತ್ರಗಳಿಗೆ ಆಯ್ಕೆ ಮಾಡಲಾದ ಅಭ್ಯರ್ಥಿಗಳ ಬಗ್ಗೆ ಅಸಮಾಧಾನ ವ್ಯಾಪಕವಾಗಿ ಕಂಡುಬಂದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಪಕ್ಷವು ಈಗ ಬೆಂಗಳೂರು ಉತ್ತರ, ಬಳ್ಳಾರಿ, ಕೆನರಾ (ಕಾರವಾರ) ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಾಯಿಸಲು ತೀರ್ಮಾನಿಸಿದೆ.