ಚುನಾವಣೆ: ಕಪ್ಪುಹಣ ತಡೆಗೆ ಕಠಿಣ ಕ್ರಮ
ನವದೆಹಲಿ, ಏ. 7 (ಪಿಟಿಐ, ಯುಎನ್ಐ)– ಚುನಾವಣಾ ವೆಚ್ಚದ ಬಗ್ಗೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ಚುನಾವಣೆ ವೇಳೆ ಹಣದ ‘ದುರುಪಯೋಗ’ ಆಗುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಚುನಾವಣಾ ಆಯೋಗ ಇಂದು ಆದೇಶಿಸಿದೆ. ಸಂಸತ್ ಸದಸ್ಯರ ಚುನಾವಣಾ ವೆಚ್ಚದ ಮಿತಿಯನ್ನು ಹೆಚ್ಚಿಸುವಂತೆ ಆಯುಕ್ತ ಡಾ. ಜಿ.ವಿ.ಜಿ. ಕೃಷ್ಣಮೂರ್ತಿ ಕೇಂದ್ರಕ್ಕೆ ಸಲಹೆ ಮಾಡಿದ್ದಾರೆ.