ಸರ್ಕಾರ ರಚನೆಗೆ ಬಿಜೆಪಿ, ರಾಷ್ಟ್ರೀಯ ರಂಗ ಪೈಪೋಟಿ
ನವದೆಹಲಿ, ಮೇ 10 (ಪಿಟಿಐ)– ದೆಹಲಿಯ ಗದ್ದುಗೆ ಹಿಡಿಯಲು ವಿವಿಧ ರಾಜಕೀಯ ಪಾಳಯಗಳಲ್ಲಿ ಬಿರುಸಿನ ಚಟುವಟಿಕೆ ಆರಂಭವಾಗಿದ್ದು, ಪಿ.ವಿ.ನರಸಿಂಹ ರಾವ್ ನೇತೃತ್ವದ ಸರ್ಕಾರ ರಾಜೀನಾಮೆ ನೀಡಿದೆ. ಯಾವ ಪಕ್ಷಕ್ಕೂ ಪೂರ್ಣ ಬಹುಮತ ಸಿಗದ ಪರಿಸ್ಥಿತಿಯಲ್ಲಿ ಕೇಂದ್ರದಲ್ಲಿ ಸರ್ಕಾರ ರಚಿಸಲು ಒಂದೆಡೆ ಬಿಜೆಪಿ ಪ್ರಯತ್ನ ನಡೆಸಿದರೆ, ಇನ್ನೊಂದೆಡೆ ರಾಷ್ಟ್ರೀಯ ರಂಗ ಮತ್ತು ಎಡರಂಗ ಕೂಡಾ ಬಿಜೆಪಿ ಹೊರತಾದ ಸಮ್ಮಿಶ್ರ ಸರ್ಕಾರ ರಚನೆ ಯತ್ನಗಳನ್ನು ಆರಂಭಿಸಿವೆ.