<p><strong>ಕಾಂಗೈ ಬೆಂಬಲಕ್ಕೆ ರಾಷ್ಟ್ರೀಯರಂಗ ಯತ್ನ<br />ನವದೆಹಲಿ, ಮೇ 11 (ಪಿಟಿಐ)–</strong> ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚಿಸುವ ನಿಟ್ಟಿನಲ್ಲಿ ಎಡರಂಗ ಮತ್ತು ಜನತಾದಳ ಇಂದು ಗಂಭೀರ ಪ್ರಯತ್ನಗಳನ್ನು ಆರಂಭಿಸಿದವು. ಸಿಪಿಎಂ ಮುಖಂಡರಾದ ಜ್ಯೋತಿ ಬಸು ಮತ್ತು ಹರ್ಕಿಶನ್ಸಿಂಗ್ ಸುರ್ಜಿತ್ ಅವರು ಇಂದು ರಾಷ್ಟ್ರಪತಿಯನ್ನು ಭೇಟಿಯಾಗಿ ಸರ್ಕಾರ ರಚಿಸಲು ಆಹ್ವಾನಿಸುವಂತೆ ಕೋರಿದರು.</p>.<p>ಈ ಮಧ್ಯೆ ಜನತಾದಳವು, ಒಂದೋ ತಾನು ಸರ್ಕಾರ ರಚಿಸಲು ಕಾಂಗ್ರೆಸ್ ಬೇಷರತ್ ಬೆಂಬಲ ನೀಡಬೇಕು, ಇಲ್ಲವಾದರೆ ಪಿ.ವಿ.ನರಸಿಂಹ ರಾವ್ ಹೊರತಾದ ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಜನತಾದಳ ಬೆಂಬಲ ನೀಡುತ್ತದೆ ಎಂದು ಘೋಷಿಸಿದೆ.</p>.<p><strong>ಸರ್ಕಾರ ರಚನೆಗೆ ಬಿಜೆಪಿ ಯತ್ನ<br />ನವದೆಹಲಿ, ಮೇ 11 (ಪಿಟಿಐ)–</strong> ಬಿಜೆಪಿ ಸಂಸದೀಯ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಸರ್ಕಾರದ ನೇತೃತ್ವ ವಹಿಸುವಂತೆ ಆಹ್ವಾನ ನೀಡಬೇಕೆಂದು ರಾಷ್ಟ್ರಪತಿ ಶಂಕರ್ ದಯಾಳ್ ಶರ್ಮಾ ಅವರಿಗೆ ಮನವಿ ಮಾಡುವ ಮೂಲಕ ಪಕ್ಷ ಕೇಂದ್ರದಲ್ಲಿ ಅಧಿಕಾರ ಪಡೆಯುವತ್ತ ತನ್ನ ಮೊದಲ ಹೆಜ್ಜೆಯಿರಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಂಗೈ ಬೆಂಬಲಕ್ಕೆ ರಾಷ್ಟ್ರೀಯರಂಗ ಯತ್ನ<br />ನವದೆಹಲಿ, ಮೇ 11 (ಪಿಟಿಐ)–</strong> ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚಿಸುವ ನಿಟ್ಟಿನಲ್ಲಿ ಎಡರಂಗ ಮತ್ತು ಜನತಾದಳ ಇಂದು ಗಂಭೀರ ಪ್ರಯತ್ನಗಳನ್ನು ಆರಂಭಿಸಿದವು. ಸಿಪಿಎಂ ಮುಖಂಡರಾದ ಜ್ಯೋತಿ ಬಸು ಮತ್ತು ಹರ್ಕಿಶನ್ಸಿಂಗ್ ಸುರ್ಜಿತ್ ಅವರು ಇಂದು ರಾಷ್ಟ್ರಪತಿಯನ್ನು ಭೇಟಿಯಾಗಿ ಸರ್ಕಾರ ರಚಿಸಲು ಆಹ್ವಾನಿಸುವಂತೆ ಕೋರಿದರು.</p>.<p>ಈ ಮಧ್ಯೆ ಜನತಾದಳವು, ಒಂದೋ ತಾನು ಸರ್ಕಾರ ರಚಿಸಲು ಕಾಂಗ್ರೆಸ್ ಬೇಷರತ್ ಬೆಂಬಲ ನೀಡಬೇಕು, ಇಲ್ಲವಾದರೆ ಪಿ.ವಿ.ನರಸಿಂಹ ರಾವ್ ಹೊರತಾದ ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಜನತಾದಳ ಬೆಂಬಲ ನೀಡುತ್ತದೆ ಎಂದು ಘೋಷಿಸಿದೆ.</p>.<p><strong>ಸರ್ಕಾರ ರಚನೆಗೆ ಬಿಜೆಪಿ ಯತ್ನ<br />ನವದೆಹಲಿ, ಮೇ 11 (ಪಿಟಿಐ)–</strong> ಬಿಜೆಪಿ ಸಂಸದೀಯ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಸರ್ಕಾರದ ನೇತೃತ್ವ ವಹಿಸುವಂತೆ ಆಹ್ವಾನ ನೀಡಬೇಕೆಂದು ರಾಷ್ಟ್ರಪತಿ ಶಂಕರ್ ದಯಾಳ್ ಶರ್ಮಾ ಅವರಿಗೆ ಮನವಿ ಮಾಡುವ ಮೂಲಕ ಪಕ್ಷ ಕೇಂದ್ರದಲ್ಲಿ ಅಧಿಕಾರ ಪಡೆಯುವತ್ತ ತನ್ನ ಮೊದಲ ಹೆಜ್ಜೆಯಿರಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>