<p><strong>ಪ್ರಧಾನಿ ಹುದ್ದೆಗೆ ಜ್ಯೋತಿ ಬಸು ರಾಷ್ಟ್ರೀಯ– ಎಡರಂಗದ ಅಭ್ಯರ್ಥಿ<br />ನವದೆಹಲಿ, ಮೇ 13– </strong>ಕೇಂದ್ರದಲ್ಲಿ ಸರ್ಕಾರ ರಚಿಸಲು ಯತ್ನಿಸುತ್ತಿರುವ ರಾಷ್ಟ್ರೀಯ ರಂಗ– ಎಡರಂಗಗಳ ಕೂಟ ಇಂದು ರಾತ್ರಿ ತುರ್ತು ಸಭೆ ಸೇರಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಜ್ಯೋತಿ ಬಸು ಅವರನ್ನು ಪ್ರಧಾನಿ ಪದವಿಗೆ ಒಮ್ಮತದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ.</p>.<p>ತುರ್ತಾಗಿ ಕರೆದ ಮೂರನೇ ರಂಗದ ಪ್ರಮುಖ ನಾಯಕರ ಸಭೆಯಲ್ಲಿ ಪ್ರಧಾನಿ ಪದವಿಗೆ ಜ್ಯೋತಿ ಬಸು ಅವರ ಹೆಸರನ್ನು ಮಾಜಿ ಪ್ರಧಾನಿ ವಿಶ್ವನಾಥ ಪ್ರತಾಪ್ ಸಿಂಗ್ ಅವರು ಸೂಚಿಸಿದರು. ಸೂಚನೆಯನ್ನು ಸಭೆ ಸರ್ವಾನುಮತದಿಂದ ಅಂಗೀಕರಿಸಿತು. ಜ್ಯೋತಿ ಬಸು ಅವರೂ ಈ ಸಭೆಯಲ್ಲಿ ಹಾಜರಿದ್ದರು.</p>.<p><strong>ಬಿಜೆಪಿ ಸರ್ಕಾರ ಖಚಿತ: ಅಟಲ್<br />ನವದೆಹಲಿ, ಮೇ 13 (ಪಿಟಿಐ)–</strong> ರಾಷ್ಟ್ರೀಯ ರಂಗ ಹಾಗೂ ಕಾಂಗ್ರೆಸ್ ಎಷ್ಟೇ ಪ್ರಯತ್ನಿಸಿದರೂ ಬಿಜೆಪಿ ಸರ್ಕಾರ ರಚಿಸುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ ಹೇಳಿದ್ದಾರೆ.</p>.<p>ಇಂದು ಬೆಳಿಗ್ಗೆ ಪ್ರಕಾಶ್ಸಿಂಗ್ ಬಾದಲ್ ನೇತೃತ್ವದ ಅಕಾಲಿದಳದ ನಿಯೋಗ ತಮ್ಮನ್ನು ಭೇಟಿ ಮಾಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರಧಾನಿ ಹುದ್ದೆಗೆ ಜ್ಯೋತಿ ಬಸು ರಾಷ್ಟ್ರೀಯ– ಎಡರಂಗದ ಅಭ್ಯರ್ಥಿ<br />ನವದೆಹಲಿ, ಮೇ 13– </strong>ಕೇಂದ್ರದಲ್ಲಿ ಸರ್ಕಾರ ರಚಿಸಲು ಯತ್ನಿಸುತ್ತಿರುವ ರಾಷ್ಟ್ರೀಯ ರಂಗ– ಎಡರಂಗಗಳ ಕೂಟ ಇಂದು ರಾತ್ರಿ ತುರ್ತು ಸಭೆ ಸೇರಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಜ್ಯೋತಿ ಬಸು ಅವರನ್ನು ಪ್ರಧಾನಿ ಪದವಿಗೆ ಒಮ್ಮತದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ.</p>.<p>ತುರ್ತಾಗಿ ಕರೆದ ಮೂರನೇ ರಂಗದ ಪ್ರಮುಖ ನಾಯಕರ ಸಭೆಯಲ್ಲಿ ಪ್ರಧಾನಿ ಪದವಿಗೆ ಜ್ಯೋತಿ ಬಸು ಅವರ ಹೆಸರನ್ನು ಮಾಜಿ ಪ್ರಧಾನಿ ವಿಶ್ವನಾಥ ಪ್ರತಾಪ್ ಸಿಂಗ್ ಅವರು ಸೂಚಿಸಿದರು. ಸೂಚನೆಯನ್ನು ಸಭೆ ಸರ್ವಾನುಮತದಿಂದ ಅಂಗೀಕರಿಸಿತು. ಜ್ಯೋತಿ ಬಸು ಅವರೂ ಈ ಸಭೆಯಲ್ಲಿ ಹಾಜರಿದ್ದರು.</p>.<p><strong>ಬಿಜೆಪಿ ಸರ್ಕಾರ ಖಚಿತ: ಅಟಲ್<br />ನವದೆಹಲಿ, ಮೇ 13 (ಪಿಟಿಐ)–</strong> ರಾಷ್ಟ್ರೀಯ ರಂಗ ಹಾಗೂ ಕಾಂಗ್ರೆಸ್ ಎಷ್ಟೇ ಪ್ರಯತ್ನಿಸಿದರೂ ಬಿಜೆಪಿ ಸರ್ಕಾರ ರಚಿಸುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ ಹೇಳಿದ್ದಾರೆ.</p>.<p>ಇಂದು ಬೆಳಿಗ್ಗೆ ಪ್ರಕಾಶ್ಸಿಂಗ್ ಬಾದಲ್ ನೇತೃತ್ವದ ಅಕಾಲಿದಳದ ನಿಯೋಗ ತಮ್ಮನ್ನು ಭೇಟಿ ಮಾಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>