ರಾಷ್ಟ್ರಪತಿ ಭವನದ ಅಶೋಕ ಹಾಲ್ನಲ್ಲಿ ನಡೆಯಲಿರುವ ಸಮಾರಂಭ ದಲ್ಲಿ ವಾಜಪೇಯಿ ಹಾಗೂ 10 ಮಂದಿ ಸದಸ್ಯರಿಗೆ ರಾಷ್ಟ್ರಪತಿ ಡಾ. ಶಂಕರ್ ದಯಾಳ್ ಶರ್ಮಾ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ. ಏಕೈಕ ದೊಡ್ಡ ಪಕ್ಷದ ನಾಯಕರಾದ ವಾಜಪೇಯಿ ಅವರನ್ನು ಸರ್ಕಾರ ರಚಿಸುವಂತೆ ರಾಷ್ಟ್ರಪತಿ ಶರ್ಮಾ ಅವರು ಇಂದು ಔಪಚಾರಿಕವಾಗಿ ಆಹ್ವಾನ ನೀಡಿದರು. ಮೇ 31ರ ಒಳಗೆ ಸದನದಲ್ಲಿ ಬಹುಮತ ಸಾಬೀತು ಪಡಿಸುವಂತೆ ಕೇಳಿದ್ದಾರೆ.