ಬೆಂಗಳೂರು, ಜುಲೈ 10– ತಮಿಳುನಾಡಿಗೆ ಐದು ಟಿಎಂಸಿ ಕಾವೇರಿ ನೀರು ಬಿಟ್ಟ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸುವ ಹಾಗೂ ತಕ್ಷಣವೇ ನೀರು ಬಿಡುವುದನ್ನು ನಿಲ್ಲಿಸುವಂತೆ ಆಗ್ರಹಿಸುವ ನಿರ್ಣಯವನ್ನು ವಿರೋಧ ಪಕ್ಷಗಳು ಇಂದು ವಿಧಾನಸಭೆಯಲ್ಲಿ ಮಂಡಿಸಿದವು.
‘ಪ್ರಧಾನಿ ಎಚ್.ಡಿ. ದೇವೇಗೌಡರನ್ನು ತೃಪ್ತಿಪಡಿಸಲು ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟಿದೆ’ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ನೇರವಾಗಿ ಆರೋಪಿಸಿದರು.