ನವದೆಹಲಿ, ಡಿ. 19 (ಪಿಟಿಐ)– ಕಾಂಗ್ರೆಸ್ ಸಂಸದೀಯ ಪಕ್ಷದ ಕಾರ್ಯಕಾರಿಣಿಯ ಒತ್ತಡಕ್ಕೂ ಜಗ್ಗದೆ, ವಿರೋಧಿ ಗುಂಪಿನ ಆಗ್ರಹಕ್ಕೂ ಮಣಿಯದೆ, ಸಂಸದೀಯ ಪಕ್ಷದ ಸರ್ವ ಸದಸ್ಯರ ಸಭೆಯಲ್ಲಿ ಬಲಾಬಲ ಪ್ರದರ್ಶನಕ್ಕೆ ಸಿದ್ಧರಾಗಿದ್ದ ಮಾಜಿ ಪ್ರಧಾನಿ ನರಸಿಂಹರಾವ್ ಅವರು ಪಕ್ಷದ ಅಧ್ಯಕ್ಷರ ಸೂಚನೆ ಮೇರೆಗೆ ಕೊನೆ ಕ್ಷಣದಲ್ಲಿ ರಾಜೀನಾಮೆ ನೀಡುವುದರೊಂದಿಗೆ ಎರಡು ದಿನಗಳ ರಾಜಕೀಯ ನಾಟಕಕ್ಕೆ ಅಂತಿಮ ತೆರೆ ಬಿದ್ದಂತಾಗಿದೆ.