ತುರ್ತು ಅಧಿವೇಶನಕ್ಕೆ ಪ್ರತಿಪಕ್ಷಗಳ ಒತ್ತಡ
ಬೆಂಗಳೂರು, ಡಿ.24– ರಾಜ್ಯದ ಕಾನೂನು ಸುವ್ಯವಸ್ಥೆ ಹಾಗೂ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು, ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ ಎಂದು ಆರೋಪಿಸಿರುವ ವಿರೋಧ ಪಕ್ಷಗಳ ಮುಖಂಡರು, ಚರ್ಚೆಗಾಗಿ ಕೂಡಲೇ ವಿಧಾನಸಭೆಯ ಅಧಿವೇಶನ ಕರೆಯುವಂತೆ ಒತ್ತಾಯಿಸಲು ರಾಜ್ಯಪಾಲರು ಹಾಗೂ ವಿಧಾನಸಭೆಯ ಅಧ್ಯಕ್ಷರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲು ತೀರ್ಮಾನಿಸಿದ್ದಾರೆ.