ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಶನಿವಾರ, ಮಾರ್ಚ್ 22, 1997

Last Updated 21 ಮಾರ್ಚ್ 2022, 19:30 IST
ಅಕ್ಷರ ಗಾತ್ರ

ಮಾಯಾವತಿ ಸರ್ಕಾರ ಇಂದು ಪ್ರಮಾಣವಚನ
ಲಖನೌ, ಮಾರ್ಚ್ 21 (ಪಿಟಿಐ)–
ಉತ್ತರಪ್ರದೇಶದಲ್ಲಿ ಮಾಯಾವತಿ ನೇತೃತ್ವದ ಬಿಎಸ್‌ಪಿ– ಬಿಜೆಪಿ ಪಕ್ಷಗಳ ಸಮ್ಮಿಶ್ರ ಸರ್ಕಾರದ ಐವರು ಸದಸ್ಯರ ಸಚಿವ ಸಂಪುಟ ಇಂದು ಪ್ರಮಾಣವಚನ ಸ್ವೀಕರಿಸುವ ಮೂಲಕ ಕಳೆದ ಐದು ತಿಂಗಳ ಅವಧಿಯ ರಾಷ್ಟ್ರಪತಿ ಆಳ್ವಿಕೆ ಕೊನೆಗೊಂಡಿತು.

ಆಲಮಟ್ಟಿ ಅಣೆ ನಿರ್ಮಾಣ ಕಾಮಗಾರಿ ನಿಲ್ಲದು
ಬೆಂಗಳೂರು, ಮಾರ್ಚ್ 21–
ಆಲಮಟ್ಟಿ ಅಣೆ ಕಟ್ಟೆ ನಿರ್ಮಾಣ ಕಾರ್ಯಕ್ಕೆ ಆಂಧ್ರಪ್ರದೇಶವಾಗಲೀ ಅಥವಾ ಯಾರೇ ಆಗಲಿ ಅಡಚಣೆ ಉಂಟು ಮಾಡುವುದನ್ನು ಸಹಿಸುವುದಿಲ್ಲ. ನಿಯೋಜಿಸಿರುವಂತೆ ಕೈಗೊಂಡಿರುವ ಅಣೆಕಟ್ಟಿನ ಕಾಮಗಾರಿಗಳನ್ನು ಯಾವುದೇ ಕಾರಣದಿಂದ ಸ್ಥಗಿತಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸುವ ನಿರ್ಣಯವನ್ನು ಇಂದು ವಿಧಾನಸಭೆಯು ಸರ್ವಾನುಮತದಿಂದ ಅಂಗೀಕರಿಸಿತು. ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರು ಮಂಡಿಸಿದ ನಿರ್ಣಯಕ್ಕೆ ಪಕ್ಷಬೇಧವಿಲ್ಲದೆ ಎಲ್ಲರ ಒಪ್ಪಿಗೆ ದೊರೆಯಿತು.

ಸುಪ್ರೀಂ ಕೋರ್ಟಿಗೆ ಆಂಧ್ರದ ಮೊರೆ
ಹೈದರಾಬಾದ್, ಮಾರ್ಚ್ 21 (ಪಿಟಿಐ)
– ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಳವನ್ನು ಸ್ಥಗಿತಗೊಳಿಸುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶಿಸಬೇಕು ಎಂದು ಆಂಧ್ರಪ್ರದೇಶ ಸರ್ಕಾರ ಇಂದು ಸುಪ್ರೀಂ ಕೋರ್ಟಿಗೆ ಮನವಿ ಸಲ್ಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT