ಈಗಾಗಲೇ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಸದಸ್ಯರಾಗಿ ಆಯ್ಕೆ ಆಗಿರುವ ಶಿಕ್ಷೆಗೊಳಗಾದ ವ್ಯಕ್ತಿಗಳಿಗೆ ಈಗ ಹೊರಡಿಸಿರುವ ಆದೇಶ ಸಂಬಂಧ ಪಡುವುದಿಲ್ಲ. ಮುಂದಿನ ವರ್ಷ ನಾಗಾಲ್ಯಾಂಡ್, ತ್ರಿಪುರಾ, ಮಿಜೊರಾಂ, ಹಿಮಾಚಲ ಪ್ರದೇಶ, ಮೇಘಾಲಯ, ದೆಹಲಿ, ಮಧ್ಯಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳಿಗೆ ಈ ಆದೇಶ ಅನ್ವಯಿಸುತ್ತದೆ ಎಂದು ಸ್ಪಷ್ಟಪಡಿಸಿದೆ.