ಕೃಷ್ಣಾ, ವಿ.ಸಿ. ನಾಲಾ ಗುತ್ತಿಗೆ ನ್ಯಾಯಾಂಗ ತನಿಖೆಗೆ ಆಗ್ರಹ
ಬೆಂಗಳೂರು, ಸೆ. 2– ಕೃಷ್ಣಾ ಮೇಲ್ಡಂಡೆ ಯೋಜನೆ ಕಾಮಗಾರಿಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ ನೀಡಿರುವ ತುಂಡು ಗುತ್ತಿಗೆ ವ್ಯವಹಾರ: ವಿಶ್ವೇಶ್ವರಯ್ಯ ನಾಲಾ ಆಧುನೀಕರಣ ಯೋಜನೆಯ ಅಸಮರ್ಪಕ ಕಾಮ ಗಾರಿ ಬಗೆಗೆ ನ್ಯಾಯಾಂಗ ವಿಚಾರಣೆ ನಡೆಸು ವಂತೆ ವಿರೋಧ ಪಕ್ಷದ ನಾಯಕ ಎಂ. ಮಲ್ಲಿಕಾರ್ಜುನ ಖರ್ಗೆ ಅವರು ಇಂದು ವಿಧಾನಸಭೆಯಲ್ಲಿ ಸರ್ಕಾರವನ್ನು ಆಗ್ರಹಿಸಿದರು.