ನವದೆಹಲಿ, ನ. 8 (ಯುಎನ್ಐ, ಪಿಟಿಐ)– ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆಗೆ ತಮಿಳುನಾಡಿನ ಮುಖ್ಯಮಂತ್ರಿ ಎಂ. ಕರುಣಾನಿಧಿ, ಮಾಜಿ ಪ್ರಧಾನಿಗಳಾದ ವಿ.ಪಿ.ಸಿಂಗ್ ಮತ್ತು ಚಂದ್ರಶೇಖರ್ ಹಾಗೂ ಹಣಕಾಸು ಸಚಿವ ಪಿ.ಚಿದಂಬರಂ ಅವರು ವಿವಿಧ ಹಂತಗಳಲ್ಲಿ ಎಸಗಿದ ಲೋಪವೇ ಕಾರಣ ಎಂದು ಪ್ರಕರಣದ ವಿಚಾರಣೆ ನಡೆಸುತ್ತಿರುವ ಜೈನ್ ಆಯೋಗ ತನ್ನ ಮಧ್ಯಂತರ ವರದಿಯಲ್ಲಿ ಅವರ ವಿರುದ್ಧ ದೋಷಾರೋಪ ಹೊರಿಸಿದೆ.