ಕೇಂದ್ರ ಸರ್ಕಾರವು ಈಗಾಗಲೇ ಕಾವೇರಿ ನದಿ ನೀರು ಪ್ರಾಧಿಕಾರ ರಚನೆಯನ್ನು ಕೈಗೆತ್ತಿಕೊಂಡಿದ್ದು, ಈ ಬಗೆಗೆ ಮುಖ್ಯವಾಗಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ಒಮ್ಮತ ತರುವ ಪ್ರಯತ್ನವನ್ನು ಕೇಂದ್ರ ಸರ್ಕಾರ ನಡೆಸುತ್ತಿದೆ. ಆದ್ದರಿಂದ ಈ ಯೋಜನೆಯನ್ನು ರೂಪಿಸಿದ್ದರೂ, ಜಾರಿಗೆ ತರುವಲ್ಲಿ ವಿಳಂಬವಾಗಿದೆ ಎಂದು ಅಟಾರ್ನಿ ಜನರಲ್ ಅಶೋಕ್ ದೇಸಾಯಿ ಇಂದು ಈ ಪ್ರಕರಣದ ಬಗೆಗೆ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ವರ್ಮಾ ಮತ್ತು ನ್ಯಾಯಮೂರ್ತಿ ಬಿ.ಎನ್. ಕೃಪಾಲ್ ಅವರ ನ್ಯಾಯಪೀಠಕ್ಕೆ ಮನವಿ ಮಾಡಿದರು.