ನವದೆಹಲಿ, ಮೇ 20 (ಪಿಟಿಐ, ಯುಎನ್ಐ)– ದೇಶದಲ್ಲಿ ಕೆಲವು ರಾಜಕೀಯ ಪಕ್ಷಗಳು ತತ್ವರಹಿತ ರಾಜಕೀಯ ನಡೆಸಿವೆ ಎಂದು ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಮಾಡಿರುವ ಆರೋಪವನ್ನು ತೃತೀಯ ರಂಗದ ನಾಯಕರು ಇಂದು ಕಟುವಾಗಿ ಟೀಕಿಸಿದ್ದಾರೆ. ದೇಶವನ್ನು ಉದ್ದೇಶಿಸಿ ಭಾಷಣ ಮಾಡುವ ಅವಕಾಶವನ್ನು ವಿರೋಧ ಪಕ್ಷಗಳನ್ನು ಟೀಕಿಸಲು ವಾಜಪೇಯಿ ಬಳಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ದೂರಿದೆ.