<p>ಬೆಂಗಳೂರು, ಜುಲೈ 2– ಹುಬ್ಬಳ್ಳಿಯಲ್ಲಿ ಪ್ರತ್ಯೇಕ ರೈಲ್ವೆ ವಲಯ ಸ್ಥಾಪನೆ ಕುರಿತು ‘ಪರಿಶೀಲಿಸಬಹುದು’ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಬಂಗಾರು ಲಕ್ಷ್ಮಣ್ ಅವರು, ಇಂದು ಇಲ್ಲಿ ಹೇಳಿದರು.</p><p>ಬೆಂಗಳೂರು– ಜೋಧಪುರ್ ಎಕ್ಸ್ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿಸಲು ಇಲ್ಲಿಗೆ ಆಗಮಿಸಿದ್ದ ಅವರು, ‘ಪ್ರತ್ಯೇಕ ರೈಲ್ವೆ ವಲಯ ಸ್ಥಾಪನೆ ಅಸಾಧ್ಯವೇನೂ ಅಲ್ಲ’ ಎಂಬುದನ್ನು ಪತ್ರಿಕಾಗೋಷ್ಠಿಯಲ್ಲಿ ಸೂಚ್ಯವಾಗಿ ಹೇಳಿದರು.</p><p>ಬೆಂಗಳೂರಿನಲ್ಲಿಯೇ ನೈರುತ್ಯ ರೈಲ್ವೆ ವಲಯ ಉಳಿಯಬೇಕು ಎಂದು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಕೇಂದ್ರ ಕಾನೂನು<br>ಸಚಿವಾಲಯದೊಂದಿಗೆ ಸಮಾಲೋಚಿಸಲಾಗುವುದು. ಇಡೀ ತೀರ್ಪನ್ನು ಆಮೂಲಾಗ್ರವಾಗಿ ಪರಿಶೀಲಿಸಿದ ನಂತರವೇ ‘ಕೇಂದ್ರ ಮುಂದಿನ ಹೆಜ್ಜೆ ಇಡಲು ಸಾಧ್ಯ’ ಎಂದು ಅವರು ನುಡಿದರು.</p><p><strong>ಫುಟ್ಬಾಲ್: ಫ್ರಾನ್ಸ್ ಮಡಿಲಿಗೆ ಯೂರೊ ಕಪ್</strong></p><p>ರೊಟರ್ಡರ್ಮ್, ಜುಲೈ 2– ಫ್ರಾನ್ಸ್ನ ಫುಟ್ಬಾಲ್ ತಂಡವು ಯೂರೊ ಕಪ್ ಅನ್ನು ಮುಡಿಗೇರಿಸಿಕೊಂಡಿತು. ಇಂದು ನಡೆದ ಫೈನಲ್ನಲ್ಲಿ ಇಟಲಿ ತಂಡವನ್ನು 2–1 ಗೋಲುಗಳಿಂದ ಸೋಲಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು, ಜುಲೈ 2– ಹುಬ್ಬಳ್ಳಿಯಲ್ಲಿ ಪ್ರತ್ಯೇಕ ರೈಲ್ವೆ ವಲಯ ಸ್ಥಾಪನೆ ಕುರಿತು ‘ಪರಿಶೀಲಿಸಬಹುದು’ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಬಂಗಾರು ಲಕ್ಷ್ಮಣ್ ಅವರು, ಇಂದು ಇಲ್ಲಿ ಹೇಳಿದರು.</p><p>ಬೆಂಗಳೂರು– ಜೋಧಪುರ್ ಎಕ್ಸ್ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿಸಲು ಇಲ್ಲಿಗೆ ಆಗಮಿಸಿದ್ದ ಅವರು, ‘ಪ್ರತ್ಯೇಕ ರೈಲ್ವೆ ವಲಯ ಸ್ಥಾಪನೆ ಅಸಾಧ್ಯವೇನೂ ಅಲ್ಲ’ ಎಂಬುದನ್ನು ಪತ್ರಿಕಾಗೋಷ್ಠಿಯಲ್ಲಿ ಸೂಚ್ಯವಾಗಿ ಹೇಳಿದರು.</p><p>ಬೆಂಗಳೂರಿನಲ್ಲಿಯೇ ನೈರುತ್ಯ ರೈಲ್ವೆ ವಲಯ ಉಳಿಯಬೇಕು ಎಂದು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಕೇಂದ್ರ ಕಾನೂನು<br>ಸಚಿವಾಲಯದೊಂದಿಗೆ ಸಮಾಲೋಚಿಸಲಾಗುವುದು. ಇಡೀ ತೀರ್ಪನ್ನು ಆಮೂಲಾಗ್ರವಾಗಿ ಪರಿಶೀಲಿಸಿದ ನಂತರವೇ ‘ಕೇಂದ್ರ ಮುಂದಿನ ಹೆಜ್ಜೆ ಇಡಲು ಸಾಧ್ಯ’ ಎಂದು ಅವರು ನುಡಿದರು.</p><p><strong>ಫುಟ್ಬಾಲ್: ಫ್ರಾನ್ಸ್ ಮಡಿಲಿಗೆ ಯೂರೊ ಕಪ್</strong></p><p>ರೊಟರ್ಡರ್ಮ್, ಜುಲೈ 2– ಫ್ರಾನ್ಸ್ನ ಫುಟ್ಬಾಲ್ ತಂಡವು ಯೂರೊ ಕಪ್ ಅನ್ನು ಮುಡಿಗೇರಿಸಿಕೊಂಡಿತು. ಇಂದು ನಡೆದ ಫೈನಲ್ನಲ್ಲಿ ಇಟಲಿ ತಂಡವನ್ನು 2–1 ಗೋಲುಗಳಿಂದ ಸೋಲಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>