ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ| ಗುರುವಾರ ಸೆಪ್ಟೆಂಬರ್‌ 19, 1996

Last Updated 18 ಸೆಪ್ಟೆಂಬರ್ 2021, 16:16 IST
ಅಕ್ಷರ ಗಾತ್ರ

ರಾಜ್ಯಸಭೆಗೆ ದೇವೇಗೌಡರ ಅವಿರೋಧ ಆಯ್ಕೆ ಖಚಿತ

ಬೆಂಗಳೂರು, ಸೆ. 18– ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುತ್ತಿರುವ ಮರು ಚುನಾವಣೆಯಲ್ಲಿ ಸ್ಪರ್ಧಿಸಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಇಂದು ನಾಮಪತ್ರ ಸಲ್ಲಿಸಿದರು. ಗೌಡರು ಸ್ಪರ್ಧಾ ಕಣದಲ್ಲಿರುವ ಏಕೈಕ ಅಭ್ಯರ್ಥಿಯಾಗಿದ್ದು ಅವರ ಅವಿರೋಧ ಆಯ್ಕೆ ಖಚಿತವಾಗಿದೆ.

ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಅಂತಿಮ ಗಳಿಗೆಗೆ ಒಂದು ಗಂಟೆ ಮುಂಚಿತವಾಗಿ ನಾಲ್ಕು ಸೆಟ್‌ಗಳಲ್ಲಿ ಅವರು ನಾಮಪತ್ರ ಸಲ್ಲಿಸಿದರು. ನಾಮ ಹಿಂತೆಗೆದುಕೊಳ್ಳುವ ಕೊನೆಯ ದಿನವಾದ ಶನಿವಾರ (ಸೆ.21) ಅಧಿಕೃತವಾಗಿ ಆಯ್ಕೆ ಘೋಷಣೆಯಾಗಲಿದೆ.

ದೇವೇಗೌಡರ ವಿರುದ್ಧ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸುವುದಾಗಿ ರಾಷ್ಟ್ರೀಯ ನವ ನಿರ್ಮಾಣ ವೇದಿಕೆಯ ಅಧ್ಯಕ್ಷ ರಾಮಕೃಷ್ಣ ಹೆಗಡೆ ಅವರ ಹೇಳಿಕೆಯಿಂದ ಉಂಟಾಗಿದ್ದ ಗೊಂದಲ, ಅನಿಶ್ಚತತೆಗೆ ತೆರೆಬಿದ್ದು ಗೌಡರ ಆಯ್ಕೆ ಸುಗಮವಾದಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT