ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25 ವರ್ಷಗಳ ಹಿಂದೆ: ಕಾಂಗ್ರೆಸ್‌ ಚುನಾವಣಾ ಪ್ರಚಾರಕ್ಕೆ ಸೋನಿಯಾ

Last Updated 29 ಡಿಸೆಂಬರ್ 2022, 19:02 IST
ಅಕ್ಷರ ಗಾತ್ರ

ಡಾ. ಚಿದಾನಂದ ಮೂರ್ತಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ನವದೆಹಲಿ, ಡಿಸೆಂಬರ್‌ 29– ಕನ್ನಡದ ಖ್ಯಾತ ಸಂಶೋಧಕ ಡಾ. ಎಂ.ಚಿದಾನಂದ ಮೂರ್ತಿ ಅವರ ‘ಹೊಸತು ಹೊಸತು’ ಪ್ರಬಂಧ ಸಂಕಲನಕ್ಕೆ 1997ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.

25 ಸಾವಿರ ನಗದು ಹಾಗೂ ಕಂಚಿನ ಫಲಕವನ್ನು ಪ್ರಶಸ್ತಿ ಒಳಗೊಂಡಿದೆ.

ಇಂದು ಡಾ. ಯು.ಆರ್‌. ಅನಂತಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಾಹಿತ್ಯ ಅಕಾಡೆಮಿ ಕಾರ್ಯಕಾರಿ ಸಮಿತಿ ಸಭೆಯು ಭಾರತೀಯ ಭಾಷೆಗಳ ಒಟ್ಟು 21 ಲೇಖಕರ ಕೃತಿಗಳಿಗೆ ಪ್ರಸಕ್ತ ಸಾಲಿನ ಪ್ರಶಸ್ತಿಗಳನ್ನು ಆಯ್ಕೆ ಮಾಡಿತು.

ಕಾಂಗ್ರೆಸ್‌ ಚುನಾವಣಾ ಪ್ರಚಾರಕ್ಕೆ ಸೋನಿಯಾ

ನವದೆಹಲಿ, ಡಿಸೆಂಬರ್ 29– ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಮತ್ತು ಕಾರ್ಯಕಾರಿಣಿ ಸದಸ್ಯರ ಮನವಿಯನ್ನು ಕೊನೆಗೂ ಒಪ್ಪಿರುವ ಸೋನಿಯಾ ಗಾಂಧಿ ಅವರು, ಬರುವ ಮಧ್ಯಂತರ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಪರವಾಗಿ ಪ್ರಚಾರ ಕೈಗೊಳ್ಳಲು ಇಂದು ನಿರ್ಧರಿಸಿದರು.

ಸೋನಿಯಾ ಅವರ ಈ ತೀರ್ಮಾನದಿಂದ ಕಾಂಗ್ರೆಸ್‌ ಇತ್ತೀಚಿನ ವರ್ಷಗಳಲ್ಲಿ ಕಳೆದುಕೊಂಡಿದ್ದ ನೆಹರೂ–ಇಂದಿರಾ ಗಾಂಧಿ ಕುಟುಂಬದ ಪಾತ್ರವು ಚುನಾವಣಾ ರಾಜಕೀಯ ರಂಗದಲ್ಲಿ ಮತ್ತೆ ವಿಜೃಂಭಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT