ನವದೆಹಲಿ, ಡಿ. 28– ಷೇರು ಹಗರಣದ ಬಗ್ಗೆ ಜಂಟಿ ಸಂಸದೀಯ ಸಮಿತಿ ಸಲ್ಲಿಸಿರುವ ವರದಿ ಸಂಸತ್ತಿನಲ್ಲಿ ಇಂದು ಚರ್ಚೆಗೆ ಬರುವುದು. ಹಣಕಾಸು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಅಂಗೀಕರಿಸುವಂತೆ ಪ್ರಧಾನಿಯವರನ್ನು ಒತ್ತಾಯಿಸಬಾರದು ಎಂದು
ಡಾ. ಮನಮೋಹನ್ಸಿಂಗ್ ಅವರಲ್ಲಿ ಈಗಾಗಲೇ ಮನವಿ ಮಾಡಿರುವ ಕಾಂಗ್ರೆಸ್ ಪಕ್ಷದ ಸದಸ್ಯರು ಈಗ ಈ ಬಗ್ಗೆ ಸಂಸತ್ತಿನಲ್ಲಿ ವಿರೋಧ ಪಕ್ಷಗಳ ದಾಳಿಯನ್ನೆದುರಿಸಲು ಸಿದ್ಧತೆ ನಡೆಸುತ್ತಿದ್ದಾರೆ.