ನವದೆಹಲಿ, ಡಿ. 26 (ಯುಎನ್ಐ, ಪಿಟಿಐ)– ಪ್ರಧಾನಿ ಪಿ.ವಿ. ನರಸಿಂಹರಾವ್ ಅವರು ಆರೋಗ್ಯ ಸಚಿವ ಬಿ. ಶಂಕರಾನಂದ ಹಾಗೂ ಗ್ರಾಮೀಣ ಅಭಿವೃದ್ಧಿ ರಾಜ್ಯ ಸಚಿವ ರಾಮೇಶ್ವರ್ ಠಾಕೂರ್ ಅವರ ರಾಜೀನಾಮೆಗಳನ್ನು ನಿರೀಕ್ಷಿಸುತ್ತಿದ್ದಾರೆ ಎಂದು ರಾಜಕೀಯ ಮೂಲಗಳು ತಿಳಿಸಿರುವುದಾಗಿ ವಾರ್ತಾ ಸಂಸ್ಥೆಗಳು ವರದಿ ಮಾಡಿದ್ದು ರಾವ್ ಅವರು ಇಂದು ರಾಷ್ಟ್ರಪತಿ ಶಂಕರ ದಯಾಳ್ ಶರ್ಮ ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.