<p><strong>ಮಂಗಳೂರು, ಆ. 14–</strong> ‘ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡದಿರಲು ಪುರುಷ ಪ್ರಧಾನ ಸಮಾಜವೇ ಕಾರಣ. ಇದಕ್ಕೆ ಬಿಜೆಪಿಯೂ ಹೊರತಲ್ಲ’ ಎಂದು ಸುಷ್ಮಾ ಸ್ವರಾಜ್ ಟೀಕಿಸಿದ್ದಾರೆ.</p><p>ಪುತ್ತೂರಿನಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು, ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆಯ ಸಂದರ್ಭದಲ್ಲಿ ವಿಪಕ್ಷಗಳು ಅದನ್ನು ಪ್ರತಿರೋಧಿಸಿದ್ದನ್ನು ಪ್ರಸ್ತಾಪಿಸಿ, ಮತ್ತೊಮ್ಮೆ ಮಸೂದೆ ಮಂಡಿಸುವ ವೇಳೆಗೆ ಸರ್ಕಾರ ಉರುಳಿತು ಎಂದರು.</p><p><strong>ಹಠಾತ್ ದಾಳಿ ವಿರುದ್ಧ ಎಚ್ಚರಿಕೆ</strong></p><p>ನವದೆಹಲಿ, ಆ. 14 (ಪಿಟಿಐ)– ಪಾಕಿಸ್ತಾನ ದಿಂದ ಬರಬಹುದಾದ ಹಠಾತ್ ಆಕ್ರಮಣಕ್ಕೆ ಸಿದ್ಧರಾಗಿರುವಂತೆ ಇಂದು ದೇಶಕ್ಕೆ ಎಚ್ಚರಿಕೆ ನೀಡಿದ ರಾಷ್ಟ್ರಪತಿ ಕೆ.ಆರ್. ನಾರಾಯಣನ್ ಅವರು, ರಕ್ಷಣಾ ವೆಚ್ಚವನ್ನು ಏರಿಸಿ ದೇಶದ ಸೈನ್ಯವನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳುವಂತೆ ಸಲಹೆ ಮಾಡಿದರು.</p><p>ಸ್ವಾತಂತ್ರ್ಯೋತ್ಸವದ ಮುನ್ನಾದಿನದ ಭಾಷಣದಲ್ಲಿ ಅವರು ಪಾಕಿಸ್ತಾನದ ಹಿಂದಿನ ನಡವಳಿಕೆ ಉದಾಹರಿಸಿ, ಸೈನ್ಯಕ್ಕೆ ಅತ್ಯಾಧುನಿಕ ಶಸ್ತ್ರಗಳನ್ನು ಒದಗಿಸಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು, ಆ. 14–</strong> ‘ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡದಿರಲು ಪುರುಷ ಪ್ರಧಾನ ಸಮಾಜವೇ ಕಾರಣ. ಇದಕ್ಕೆ ಬಿಜೆಪಿಯೂ ಹೊರತಲ್ಲ’ ಎಂದು ಸುಷ್ಮಾ ಸ್ವರಾಜ್ ಟೀಕಿಸಿದ್ದಾರೆ.</p><p>ಪುತ್ತೂರಿನಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು, ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆಯ ಸಂದರ್ಭದಲ್ಲಿ ವಿಪಕ್ಷಗಳು ಅದನ್ನು ಪ್ರತಿರೋಧಿಸಿದ್ದನ್ನು ಪ್ರಸ್ತಾಪಿಸಿ, ಮತ್ತೊಮ್ಮೆ ಮಸೂದೆ ಮಂಡಿಸುವ ವೇಳೆಗೆ ಸರ್ಕಾರ ಉರುಳಿತು ಎಂದರು.</p><p><strong>ಹಠಾತ್ ದಾಳಿ ವಿರುದ್ಧ ಎಚ್ಚರಿಕೆ</strong></p><p>ನವದೆಹಲಿ, ಆ. 14 (ಪಿಟಿಐ)– ಪಾಕಿಸ್ತಾನ ದಿಂದ ಬರಬಹುದಾದ ಹಠಾತ್ ಆಕ್ರಮಣಕ್ಕೆ ಸಿದ್ಧರಾಗಿರುವಂತೆ ಇಂದು ದೇಶಕ್ಕೆ ಎಚ್ಚರಿಕೆ ನೀಡಿದ ರಾಷ್ಟ್ರಪತಿ ಕೆ.ಆರ್. ನಾರಾಯಣನ್ ಅವರು, ರಕ್ಷಣಾ ವೆಚ್ಚವನ್ನು ಏರಿಸಿ ದೇಶದ ಸೈನ್ಯವನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳುವಂತೆ ಸಲಹೆ ಮಾಡಿದರು.</p><p>ಸ್ವಾತಂತ್ರ್ಯೋತ್ಸವದ ಮುನ್ನಾದಿನದ ಭಾಷಣದಲ್ಲಿ ಅವರು ಪಾಕಿಸ್ತಾನದ ಹಿಂದಿನ ನಡವಳಿಕೆ ಉದಾಹರಿಸಿ, ಸೈನ್ಯಕ್ಕೆ ಅತ್ಯಾಧುನಿಕ ಶಸ್ತ್ರಗಳನ್ನು ಒದಗಿಸಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>