<p>ಕಾವೇರಿ: ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ದಾವಾ</p>.<p>ನವದೆಹಲಿ, ಆ. 4– ಕಾವೇರಿ ನದಿ ನೀರು ಕುರಿತು ತಮಿಳುನಾಡು ಸರ್ಕಾರವು ಇಂದು ಸುಪ್ರೀಂ ಕೋರ್ಟಿನಲ್ಲಿ ಮೊಕದ್ದಮೆ ಹೂಡಿ ಕೇಂದ್ರ ಮತ್ತು ತಮಿಳುನಾಡು ಸರ್ಕಾರಗಳ ನಡುವೆ ಒಂದು ‘ವಿವಾದ’ ಎದ್ದಿದೆಯೆಂದು ಘೋಷಿಸುವಂತೆ ಕೋರಿತು.</p>.<p>ವಿವಾದದ ವ್ಯಾಪ್ತಿಯಲ್ಲಿರುವ ನದಿ ಯೋಜನೆಗಳನ್ನು ಮೈಸೂರು ಸರ್ಕಾರ ಮುಂದುವರಿಸದಂತೆ ತಾತ್ಕಾಲಿಕ ಪ್ರತಿಬಂಧಕಾಜ್ಞೆ ಹೊರಡಿಸಬೇಕೆಂದೂ ಅದು ಕೋರಿದೆ.</p>.<p><strong>ಸಾಮಾಜಿಕ–ಆರ್ಥಿಕ ಪ್ರಗತಿಗೆ ಒಡ್ಡಿದ ಅಡ್ಡಿ ನಿವಾರಿಸುವುದೇ ಸಂವಿಧಾನ ಮಸೂದೆ ಉದ್ದೇಶ</strong></p>.<p>ನವದೆಹಲಿ, ಆ. 4– ಗೋಲಕ್ನಾಥ್ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟು ನೀಡಿದ ತೀರ್ಪು ದೇಶದಲ್ಲಿನ ಸಾಮಾಜಿಕ–ಆರ್ಥಿಕ ಪ್ರಗತಿಗೆ ಭಾರಿ ಅಡಚಣೆಯುಂಟು ಮಾಡಿದೆ. ಕೇವಲ ಈ ಅಡಚಣೆಯನ್ನು ನಿವಾರಿಸುವುದೇ ಸಂವಿಧಾನದ (24ನೇ ತಿದ್ದುಪಡಿ) ಮಸೂದೆಯ ಉದ್ದೇಶ ಎಂದು ಕಾನೂನು ಸಚಿವ ಶ್ರೀ ಎಚ್.ಆರ್. ಗೋಖಲೆ ಅವರು ಇಂದು ಲೋಕಸಭೆಯಲ್ಲಿ ಹೇಳಿದರು.</p>.<p>ಈ ಮಸೂದೆಯ ಬಗ್ಗೆ ನಡೆದ ಚರ್ಚೆಗೆ ಉತ್ತರವೀಯುತ್ತಿದ್ದ ಗೋಖಲೆಯವರು, ‘ಭಾರತದ ಜನರು ತೀವ್ರ ಸಾಮಾಜಿಕ– ಆರ್ಥಿಕ ಬದಲಾವಣೆಗೆ ಒತ್ತಾಯ ಮಾಡುತ್ತಿ ದ್ದರು. ಈ ವಿಷಯದಲ್ಲಿ ಯಾವುದೇ ವಿಳಂಬ ವನ್ನೂ ಅವರು ಕ್ಷಮಿಸಲಾರರು’ ಎಂದು ನುಡಿದಾಗ ಸಭೆಯಲ್ಲಿ ಹರ್ಷೋದ್ಗಾರಗಳಾದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾವೇರಿ: ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ದಾವಾ</p>.<p>ನವದೆಹಲಿ, ಆ. 4– ಕಾವೇರಿ ನದಿ ನೀರು ಕುರಿತು ತಮಿಳುನಾಡು ಸರ್ಕಾರವು ಇಂದು ಸುಪ್ರೀಂ ಕೋರ್ಟಿನಲ್ಲಿ ಮೊಕದ್ದಮೆ ಹೂಡಿ ಕೇಂದ್ರ ಮತ್ತು ತಮಿಳುನಾಡು ಸರ್ಕಾರಗಳ ನಡುವೆ ಒಂದು ‘ವಿವಾದ’ ಎದ್ದಿದೆಯೆಂದು ಘೋಷಿಸುವಂತೆ ಕೋರಿತು.</p>.<p>ವಿವಾದದ ವ್ಯಾಪ್ತಿಯಲ್ಲಿರುವ ನದಿ ಯೋಜನೆಗಳನ್ನು ಮೈಸೂರು ಸರ್ಕಾರ ಮುಂದುವರಿಸದಂತೆ ತಾತ್ಕಾಲಿಕ ಪ್ರತಿಬಂಧಕಾಜ್ಞೆ ಹೊರಡಿಸಬೇಕೆಂದೂ ಅದು ಕೋರಿದೆ.</p>.<p><strong>ಸಾಮಾಜಿಕ–ಆರ್ಥಿಕ ಪ್ರಗತಿಗೆ ಒಡ್ಡಿದ ಅಡ್ಡಿ ನಿವಾರಿಸುವುದೇ ಸಂವಿಧಾನ ಮಸೂದೆ ಉದ್ದೇಶ</strong></p>.<p>ನವದೆಹಲಿ, ಆ. 4– ಗೋಲಕ್ನಾಥ್ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟು ನೀಡಿದ ತೀರ್ಪು ದೇಶದಲ್ಲಿನ ಸಾಮಾಜಿಕ–ಆರ್ಥಿಕ ಪ್ರಗತಿಗೆ ಭಾರಿ ಅಡಚಣೆಯುಂಟು ಮಾಡಿದೆ. ಕೇವಲ ಈ ಅಡಚಣೆಯನ್ನು ನಿವಾರಿಸುವುದೇ ಸಂವಿಧಾನದ (24ನೇ ತಿದ್ದುಪಡಿ) ಮಸೂದೆಯ ಉದ್ದೇಶ ಎಂದು ಕಾನೂನು ಸಚಿವ ಶ್ರೀ ಎಚ್.ಆರ್. ಗೋಖಲೆ ಅವರು ಇಂದು ಲೋಕಸಭೆಯಲ್ಲಿ ಹೇಳಿದರು.</p>.<p>ಈ ಮಸೂದೆಯ ಬಗ್ಗೆ ನಡೆದ ಚರ್ಚೆಗೆ ಉತ್ತರವೀಯುತ್ತಿದ್ದ ಗೋಖಲೆಯವರು, ‘ಭಾರತದ ಜನರು ತೀವ್ರ ಸಾಮಾಜಿಕ– ಆರ್ಥಿಕ ಬದಲಾವಣೆಗೆ ಒತ್ತಾಯ ಮಾಡುತ್ತಿ ದ್ದರು. ಈ ವಿಷಯದಲ್ಲಿ ಯಾವುದೇ ವಿಳಂಬ ವನ್ನೂ ಅವರು ಕ್ಷಮಿಸಲಾರರು’ ಎಂದು ನುಡಿದಾಗ ಸಭೆಯಲ್ಲಿ ಹರ್ಷೋದ್ಗಾರಗಳಾದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>