ತಿಳಕವಾಡಿಯ ಕಲಾಮಂದಿರದಲ್ಲಿ ಪ್ರಾರಂಭವಾದ ಎರಡು ದಿನಗಳ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಭಾಷಣ ಮಾಡಿದ ಶ್ರೀಯುತರು, ಹಿಂದಿ ಹಾಗೂ ಇಂಗ್ಲಿಷ್ ಪ್ರಭಾವ ಬೆಳೆಯುತ್ತಿರುವ ಬಗ್ಗೆ ವ್ಯಸನ ವ್ಯಕ್ತಪಡಿಸಿ ಇದರಿಂದ ಕನ್ನಡದ ಅಸ್ತಿತ್ವಕ್ಕೆ ಗಂಡಾಂತರ ಬರುವಂತಿದೆ. ರಾಜ್ಯದಲ್ಲಿನ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಪ್ರಾಶಸ್ತ್ರ್ಯಸಿಗಬೇಕಾದ ಅಗತ್ಯದ ಕುರಿತು ಒತ್ತಿ ಹೇಳಿದರು.