<p><strong>ಚಿಂತಾಮಣಿಯಲ್ಲಿ ಗೋಲಿಬಾರ್; 2 ಸಾವು, ಹತ್ತು ಜನಕ್ಕೆ ಗಾಯ</strong></p>.<p>ಚಿಂತಾಮಣಿ, ಜ. 16– ಕೋಲಾರ ಜಿಲ್ಲೆ ಚಿಂತಾಮಣಿಯಲ್ಲಿ ಹೋಟೆಲ್ಗಳಲ್ಲಿ ತಿಂಡಿ ಬೆಲೆ ಇಳಿಸಬೇಕೆಂಬ ವಿದ್ಯಾರ್ಥಿಗಳ ಚಳವಳಿ ಇಂದು ಉಗ್ರರೂಪ ತಳೆದಾಗ ಪೊಲೀಸರು ಗೋಲಿಬಾರ್ ನಡೆಸಿದುದರ ಪರಿಣಾಮವಾಗಿ ಇಬ್ಬರು ಸತ್ತು, ಹತ್ತು ಮಂದಿ ಗಾಯಗೊಂಡರು. ಇವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕ.</p>.<p>ಮಧ್ಯಾಹ್ನ ಎರಡು ಗಂಟೆ ಸಮಯದಲ್ಲಿ ಗೋಲಿಬಾರ್ ನಡೆಯಿತು. ಹೋಟೆಲುಗಳಲ್ಲಿ ತಿಂಡಿ ಬೆಲೆಗಳನ್ನು ಇಳಿಸಬೇಕೆಂದು ಒತ್ತಾಯಪಡಿಸಲು ಇಲ್ಲಿನ ಪಾಲಿಟೆಕ್ನಿಕ್ ಕಾಲೇಜು ಮತ್ತು ಪ್ರೌಢಶಾಲೆಗಳ ಸುಮಾರು ಎರಡು ಸಾವಿರ ವಿದ್ಯಾರ್ಥಿಗಳು ಇಂದು ಬೆಳಿಗ್ಗೆ ನಗರದಲ್ಲಿ ಮೆರವಣಿಗೆ ನಡೆಸಿದರು.</p>.<p>ಶಾಸ್ತ್ರಿ ರೆಸ್ಟೊರೆಂಟ್ ಹೊರತು ಉಳಿದ ಅನೇಕ ಹೋಟೆಲುಗಳು ತಿಂಡಿ ದರ ಇಳಿಸುವುದಕ್ಕೆ ಒಪ್ಪಿದ್ದವು.</p>.<p><strong>ಭೂಮಾಲೀಕರಿಗೆ ಪರಿಹಾರ: ಸಾಲ ನೀಡಲು ರಾಷ್ಟ್ರೀಕೃತ ಬ್ಯಾಂಕುಗಳ ತತ್ವಶಃ ಒಪ್ಪಿಗೆ</strong></p>.<p>ಬೆಂಗಳೂರು, ಜ. 16– ಭೂಸುಧಾರಣೆಯನ್ನು ಜಾರಿಗೆ ತರುವುದರಿಂದ ಭೂಮಾಲೀಕರಿಗೆ ನೀಡಬೇಕಾದ ಪರಿಹಾರ ಮೊಬಲಗನ್ನು ಬ್ಯಾಂಕುಗಳು ಸಾಲವಾಗಿ ನೀಡಬೇಕೆಂಬ ತತ್ವವನ್ನು ರಾಷ್ಟ್ರೀಕೃತ ಬ್ಯಾಂಕುಗಳ ಪ್ರತಿನಿಧಿಗಳು ಒಪ್ಪಿದ್ದಾರೆ.</p>.<p>ಬ್ಯಾಂಕುಗಳ ಪ್ರತಿನಿಧಿಗಳ ಸಭೆಯನ್ನು ಇಂದು ಕರೆದ ಮುಖ್ಯಮಂತ್ರಿ ಶ್ರೀ ವೀರೇಂದ್ರ ಪಾಟೀಲರು ಬ್ಯಾಂಕುಗಳ ಸಹಾಯಕ್ಕಾಗಿ ಮನವಿ ಮಾಡಿಕೊಂಡರು.</p>.<p>ಈ ಬಗ್ಗೆ ವಿವರಗಳನ್ನೊಳಗೊಂಡ ಯೋಜನೆಯನ್ನು ರೂಪಿಸಲು ಸಭೆಯಲ್ಲಿ ಅಭಿವೃದ್ಧಿ ಕಮಿಷನರು, ಕಂದಾಯ ಮತ್ತು ಹಣಕಾಸು ಇಲಾಖೆಗಳ ಕಾರ್ಯದರ್ಶಿಗಳು ಮತ್ತು ಬ್ಯಾಂಕುಗಳ ಪ್ರತಿನಿಧಿಗಳನ್ನೊಳಗೊಂಡ ಉಪ ಸಮಿತಿಯೊಂದನ್ನು ರಚಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿಯಲ್ಲಿ ಗೋಲಿಬಾರ್; 2 ಸಾವು, ಹತ್ತು ಜನಕ್ಕೆ ಗಾಯ</strong></p>.<p>ಚಿಂತಾಮಣಿ, ಜ. 16– ಕೋಲಾರ ಜಿಲ್ಲೆ ಚಿಂತಾಮಣಿಯಲ್ಲಿ ಹೋಟೆಲ್ಗಳಲ್ಲಿ ತಿಂಡಿ ಬೆಲೆ ಇಳಿಸಬೇಕೆಂಬ ವಿದ್ಯಾರ್ಥಿಗಳ ಚಳವಳಿ ಇಂದು ಉಗ್ರರೂಪ ತಳೆದಾಗ ಪೊಲೀಸರು ಗೋಲಿಬಾರ್ ನಡೆಸಿದುದರ ಪರಿಣಾಮವಾಗಿ ಇಬ್ಬರು ಸತ್ತು, ಹತ್ತು ಮಂದಿ ಗಾಯಗೊಂಡರು. ಇವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕ.</p>.<p>ಮಧ್ಯಾಹ್ನ ಎರಡು ಗಂಟೆ ಸಮಯದಲ್ಲಿ ಗೋಲಿಬಾರ್ ನಡೆಯಿತು. ಹೋಟೆಲುಗಳಲ್ಲಿ ತಿಂಡಿ ಬೆಲೆಗಳನ್ನು ಇಳಿಸಬೇಕೆಂದು ಒತ್ತಾಯಪಡಿಸಲು ಇಲ್ಲಿನ ಪಾಲಿಟೆಕ್ನಿಕ್ ಕಾಲೇಜು ಮತ್ತು ಪ್ರೌಢಶಾಲೆಗಳ ಸುಮಾರು ಎರಡು ಸಾವಿರ ವಿದ್ಯಾರ್ಥಿಗಳು ಇಂದು ಬೆಳಿಗ್ಗೆ ನಗರದಲ್ಲಿ ಮೆರವಣಿಗೆ ನಡೆಸಿದರು.</p>.<p>ಶಾಸ್ತ್ರಿ ರೆಸ್ಟೊರೆಂಟ್ ಹೊರತು ಉಳಿದ ಅನೇಕ ಹೋಟೆಲುಗಳು ತಿಂಡಿ ದರ ಇಳಿಸುವುದಕ್ಕೆ ಒಪ್ಪಿದ್ದವು.</p>.<p><strong>ಭೂಮಾಲೀಕರಿಗೆ ಪರಿಹಾರ: ಸಾಲ ನೀಡಲು ರಾಷ್ಟ್ರೀಕೃತ ಬ್ಯಾಂಕುಗಳ ತತ್ವಶಃ ಒಪ್ಪಿಗೆ</strong></p>.<p>ಬೆಂಗಳೂರು, ಜ. 16– ಭೂಸುಧಾರಣೆಯನ್ನು ಜಾರಿಗೆ ತರುವುದರಿಂದ ಭೂಮಾಲೀಕರಿಗೆ ನೀಡಬೇಕಾದ ಪರಿಹಾರ ಮೊಬಲಗನ್ನು ಬ್ಯಾಂಕುಗಳು ಸಾಲವಾಗಿ ನೀಡಬೇಕೆಂಬ ತತ್ವವನ್ನು ರಾಷ್ಟ್ರೀಕೃತ ಬ್ಯಾಂಕುಗಳ ಪ್ರತಿನಿಧಿಗಳು ಒಪ್ಪಿದ್ದಾರೆ.</p>.<p>ಬ್ಯಾಂಕುಗಳ ಪ್ರತಿನಿಧಿಗಳ ಸಭೆಯನ್ನು ಇಂದು ಕರೆದ ಮುಖ್ಯಮಂತ್ರಿ ಶ್ರೀ ವೀರೇಂದ್ರ ಪಾಟೀಲರು ಬ್ಯಾಂಕುಗಳ ಸಹಾಯಕ್ಕಾಗಿ ಮನವಿ ಮಾಡಿಕೊಂಡರು.</p>.<p>ಈ ಬಗ್ಗೆ ವಿವರಗಳನ್ನೊಳಗೊಂಡ ಯೋಜನೆಯನ್ನು ರೂಪಿಸಲು ಸಭೆಯಲ್ಲಿ ಅಭಿವೃದ್ಧಿ ಕಮಿಷನರು, ಕಂದಾಯ ಮತ್ತು ಹಣಕಾಸು ಇಲಾಖೆಗಳ ಕಾರ್ಯದರ್ಶಿಗಳು ಮತ್ತು ಬ್ಯಾಂಕುಗಳ ಪ್ರತಿನಿಧಿಗಳನ್ನೊಳಗೊಂಡ ಉಪ ಸಮಿತಿಯೊಂದನ್ನು ರಚಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>