ಬೆಂಗಳೂರು, ಡಿ. 17– ತಮ್ಮ ಹಿಂಬಾಲಕರು ಅಹಮದಾಬಾದ್ ಕಾಂಗ್ರೆಸ್ ಅಧಿವೇಶನಕ್ಕೆ ಹೋಗುವುದಕ್ಕಾಗಿ ಸಹಾಯ ಮಾಡಲು ಮುಖ್ಯಮಂತ್ರಿ ಶ್ರೀ ವೀರೇಂದ್ರ ಪಾಟೀಲ್ ಅವರು ಕ್ಷಾಮ ಪರಿಹಾರ ನಿಧಿಯನ್ನು ‘ದುರುಪಯೋಗ ಮಾಡಿದ್ದಾರೆ’ ಎಂದು ಪ್ರಧಾನಿ ಕಾಂಗ್ರೆಸ್ಸಿನ ಪ್ರಮುಖ ವ್ಯವಸ್ಥಾಪಕರಲ್ಲಿ ಒಬ್ಬರಾದ ಶ್ರೀ ಎಂ.ವಿ. ಕೃಷ್ಣಪ್ಪನವರು ಆಪಾದಿಸಿದ್ದಾರೆ.