<p><strong>‘ಪುಂಡತನದಿಂದ ಪ್ರತ್ಯೇಕರಾಜ್ಯದ ಗುರಿ ಈಡೇರದು’<br />ಹೈದರಾಬಾದ್, ಫೆ. 14– </strong>ಪುಂಡಾಟಿಕೆ ಯಿಂದ ಪ್ರತ್ಯೇಕ ರಾಜ್ಯದ ಗುರಿಯನ್ನು ಸಾಧಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರು, ಪಾದರಕ್ಷೆ ಮತ್ತು ಕಲ್ಲುಗಳನ್ನುಎಸೆಯುವುದರಲ್ಲಿ ನಿರತರಾಗಿದ್ದಉದ್ರಿಕ್ತಪೂರ್ಣ ತೆಲಂಗಾಣ ಪ್ರದರ್ಶನಕಾರರಿಗೆ ಇಂದು ಎಚ್ಚರಿಕೆ ನೀಡಿದರು.</p>.<p>ಸಮಾಜವಾದ ಮತ್ತು ಬಲಪಂಥೀಯ ಪ್ರತಿಗಾಮಿಗಳ ನಡುವಣ ಹೋರಾಟವೇ ಈ ಮಧ್ಯಂತರ ಚುನಾವಣೆಯಾದ್ದರಿಂದ, ಪ್ರತ್ಯೇಕ ರಾಜ್ಯದ ಬಗ್ಗೆ ಜನಗಳ ಮನಸ್ಸನ್ನು ಕೆರಳಿಸಿ ಮೂಲಭೂತ ರಾಷ್ಟ್ರೀಯ ಸಮಸ್ಯೆಗಳ ಮೇಲೆ ತೆರೆ ಎಳೆಯಬಾರದೆಂದೂ ಅವರುಮನವಿ ಮಾಡಿಕೊಂಡರು.</p>.<p><strong>ಭಾರತದ ವಿರುದ್ಧ ಭದ್ರತಾಮಂಡಳಿಗೆ ಪಾಕ್ ದೂರು<br />ನವದೆಹಲಿ, ಫೆ. 14–</strong> ಪಾಕಿಸ್ತಾನದ ಮಿಲಿಟರಿ ಮತ್ತು ಸಿವಿಲ್ ವಿಮಾನಗಳು ಭಾರತದ ಪ್ರದೇಶದ ಮೇಲೆ ಯಾನ ಮಾಡುವುದನ್ನು ಭಾರತ ಸರ್ಕಾರ ನಿಷೇಧಿಸಿರುವ ಬಗ್ಗೆ ಪಾಕಿಸ್ತಾನವು ವಿಶ್ವಸಂಸ್ಥೆ ಭದ್ರತಾ ಮಂಡಳಿಗೆದೂರು ಕೊಟ್ಟಿದೆ.</p>.<p>ಈ ನಿಷೇಧ ಕ್ರಮದಿಂದ ಭಾರತವು ಅಂತರರಾಷ್ಟ್ರೀಯ ಒಪ್ಪಂದವನ್ನು ಉಲ್ಲಂಘಿಸಿದೆಯೆಂದು ಪಾಕಿಸ್ತಾನ ದೂರು ಪತ್ರದಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>‘ಪುಂಡತನದಿಂದ ಪ್ರತ್ಯೇಕರಾಜ್ಯದ ಗುರಿ ಈಡೇರದು’<br />ಹೈದರಾಬಾದ್, ಫೆ. 14– </strong>ಪುಂಡಾಟಿಕೆ ಯಿಂದ ಪ್ರತ್ಯೇಕ ರಾಜ್ಯದ ಗುರಿಯನ್ನು ಸಾಧಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರು, ಪಾದರಕ್ಷೆ ಮತ್ತು ಕಲ್ಲುಗಳನ್ನುಎಸೆಯುವುದರಲ್ಲಿ ನಿರತರಾಗಿದ್ದಉದ್ರಿಕ್ತಪೂರ್ಣ ತೆಲಂಗಾಣ ಪ್ರದರ್ಶನಕಾರರಿಗೆ ಇಂದು ಎಚ್ಚರಿಕೆ ನೀಡಿದರು.</p>.<p>ಸಮಾಜವಾದ ಮತ್ತು ಬಲಪಂಥೀಯ ಪ್ರತಿಗಾಮಿಗಳ ನಡುವಣ ಹೋರಾಟವೇ ಈ ಮಧ್ಯಂತರ ಚುನಾವಣೆಯಾದ್ದರಿಂದ, ಪ್ರತ್ಯೇಕ ರಾಜ್ಯದ ಬಗ್ಗೆ ಜನಗಳ ಮನಸ್ಸನ್ನು ಕೆರಳಿಸಿ ಮೂಲಭೂತ ರಾಷ್ಟ್ರೀಯ ಸಮಸ್ಯೆಗಳ ಮೇಲೆ ತೆರೆ ಎಳೆಯಬಾರದೆಂದೂ ಅವರುಮನವಿ ಮಾಡಿಕೊಂಡರು.</p>.<p><strong>ಭಾರತದ ವಿರುದ್ಧ ಭದ್ರತಾಮಂಡಳಿಗೆ ಪಾಕ್ ದೂರು<br />ನವದೆಹಲಿ, ಫೆ. 14–</strong> ಪಾಕಿಸ್ತಾನದ ಮಿಲಿಟರಿ ಮತ್ತು ಸಿವಿಲ್ ವಿಮಾನಗಳು ಭಾರತದ ಪ್ರದೇಶದ ಮೇಲೆ ಯಾನ ಮಾಡುವುದನ್ನು ಭಾರತ ಸರ್ಕಾರ ನಿಷೇಧಿಸಿರುವ ಬಗ್ಗೆ ಪಾಕಿಸ್ತಾನವು ವಿಶ್ವಸಂಸ್ಥೆ ಭದ್ರತಾ ಮಂಡಳಿಗೆದೂರು ಕೊಟ್ಟಿದೆ.</p>.<p>ಈ ನಿಷೇಧ ಕ್ರಮದಿಂದ ಭಾರತವು ಅಂತರರಾಷ್ಟ್ರೀಯ ಒಪ್ಪಂದವನ್ನು ಉಲ್ಲಂಘಿಸಿದೆಯೆಂದು ಪಾಕಿಸ್ತಾನ ದೂರು ಪತ್ರದಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>