<p><strong>ಅಪೀಲು ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ</strong></p>.<p><strong>ನವದೆಹಲಿ, ಮಾರ್ಚ್ 2–</strong> ಆಡಳಿತ ಕಾಂಗ್ರೆಸ್ ಪಕ್ಷ ಚುನಾವಣೆ ಉದ್ದೇಶಗಳಿಗಾಗಿ ಸರ್ಕಾರಿ ಯಂತ್ರ ಬಳಸುವುದನ್ನು ತಡೆಗಟ್ಟುವಂತೆ ಕೋರಿ ಐದು ವಿರೋಧ ಪಕ್ಷಗಳು ಇಂದು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದವು.</p>.<p>ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಮತ್ತು ಆರು ಜನರ ವಿರುದ್ಧ ಈ ಸಂಬಂಧ ಸಲ್ಲಿಸಿದ್ದ ಅರ್ಜಿಯೊಂದನ್ನು ದೆಹಲಿ ಹೈಕೋರ್ಟ್ ಕಳೆದ ಮಂಗಳವಾರ ವಜಾ ಮಾಡಿತ್ತು. ದೆಹಲಿ ಹೈಕೋರ್ಟಿನ ಈ ತೀರ್ಪಿನ ವಿರುದ್ಧ ಐದು ವಿರೋಧ ಪಕ್ಷಗಳು ಈಗ ಸುಪ್ರೀಂ ಕೋರ್ಟಿಗೆ ಅಪೀಲು ಅರ್ಜಿ ಸಲ್ಲಿಸಿವೆ. ಈ ಅರ್ಜಿಯನ್ನು ತಕ್ಷಣವೇ ವಿಚಾರಣೆಗೆತ್ತಿಕೊಳ್ಳಬೇಕೆಂದು ಅರ್ಜಿದಾರರ ಪರ ವಕೀಲರು ಮಾಡಿ ಕೊಂಡ ಮನವಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿತು.</p>.<p><strong>ಬಿರುಸಿನ ಭಿತ್ತಿಪತ್ರ ಸಮರ</strong></p>.<p><strong>ಬೆಂಗಳೂರು, ಮಾರ್ಚ್ 2– </strong>ಲೋಕಸಭಾ ಚುನಾವಣೆಗಾಗಿ ಮಾರ್ಚ್ 7ರಂದು ಮತಗಟ್ಟೆಗೆ ಹೋಗುವ ಬೆಂಗಳೂರಿನಲ್ಲಿ ಭಿತ್ತಿಪತ್ರಗಳ ಸಮರ ಇನ್ನೂ ಬಿರುಸಾಗಿಯೇ ನಡೆದಿದೆ.</p>.<p>ಜನಸಂಘದ ವ್ಯಂಗ್ಯಚಿತ್ರಗಳಿಗೆದುರಾಗಿ, ಆಡಳಿತ ಕಾಂಗ್ರೆಸ್ಸು ಬೃಹತ್ ಚಿತ್ರಗಳನ್ನು ನಿಲ್ಲಿಸತೊಡಗಿದೆ. ಶ್ರೀ ಹನುಮಂತಯ್ಯನವರ ಪರವಾಗಿ ಪ್ರಚಾರಕ್ಕಿಳಿದಿರುವ ಡಿ.ಎಂ.ಕೆ ನೂರಾರು ಭಿತ್ತಿಪತ್ರಗಳನ್ನು ಗೋಡೆಗಳಿಗೇರಿಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಪೀಲು ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ</strong></p>.<p><strong>ನವದೆಹಲಿ, ಮಾರ್ಚ್ 2–</strong> ಆಡಳಿತ ಕಾಂಗ್ರೆಸ್ ಪಕ್ಷ ಚುನಾವಣೆ ಉದ್ದೇಶಗಳಿಗಾಗಿ ಸರ್ಕಾರಿ ಯಂತ್ರ ಬಳಸುವುದನ್ನು ತಡೆಗಟ್ಟುವಂತೆ ಕೋರಿ ಐದು ವಿರೋಧ ಪಕ್ಷಗಳು ಇಂದು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದವು.</p>.<p>ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಮತ್ತು ಆರು ಜನರ ವಿರುದ್ಧ ಈ ಸಂಬಂಧ ಸಲ್ಲಿಸಿದ್ದ ಅರ್ಜಿಯೊಂದನ್ನು ದೆಹಲಿ ಹೈಕೋರ್ಟ್ ಕಳೆದ ಮಂಗಳವಾರ ವಜಾ ಮಾಡಿತ್ತು. ದೆಹಲಿ ಹೈಕೋರ್ಟಿನ ಈ ತೀರ್ಪಿನ ವಿರುದ್ಧ ಐದು ವಿರೋಧ ಪಕ್ಷಗಳು ಈಗ ಸುಪ್ರೀಂ ಕೋರ್ಟಿಗೆ ಅಪೀಲು ಅರ್ಜಿ ಸಲ್ಲಿಸಿವೆ. ಈ ಅರ್ಜಿಯನ್ನು ತಕ್ಷಣವೇ ವಿಚಾರಣೆಗೆತ್ತಿಕೊಳ್ಳಬೇಕೆಂದು ಅರ್ಜಿದಾರರ ಪರ ವಕೀಲರು ಮಾಡಿ ಕೊಂಡ ಮನವಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿತು.</p>.<p><strong>ಬಿರುಸಿನ ಭಿತ್ತಿಪತ್ರ ಸಮರ</strong></p>.<p><strong>ಬೆಂಗಳೂರು, ಮಾರ್ಚ್ 2– </strong>ಲೋಕಸಭಾ ಚುನಾವಣೆಗಾಗಿ ಮಾರ್ಚ್ 7ರಂದು ಮತಗಟ್ಟೆಗೆ ಹೋಗುವ ಬೆಂಗಳೂರಿನಲ್ಲಿ ಭಿತ್ತಿಪತ್ರಗಳ ಸಮರ ಇನ್ನೂ ಬಿರುಸಾಗಿಯೇ ನಡೆದಿದೆ.</p>.<p>ಜನಸಂಘದ ವ್ಯಂಗ್ಯಚಿತ್ರಗಳಿಗೆದುರಾಗಿ, ಆಡಳಿತ ಕಾಂಗ್ರೆಸ್ಸು ಬೃಹತ್ ಚಿತ್ರಗಳನ್ನು ನಿಲ್ಲಿಸತೊಡಗಿದೆ. ಶ್ರೀ ಹನುಮಂತಯ್ಯನವರ ಪರವಾಗಿ ಪ್ರಚಾರಕ್ಕಿಳಿದಿರುವ ಡಿ.ಎಂ.ಕೆ ನೂರಾರು ಭಿತ್ತಿಪತ್ರಗಳನ್ನು ಗೋಡೆಗಳಿಗೇರಿಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>