ಮಂಗಳೂರು, ಜ. 22– ಬೆಂಗಳೂರು ನಗರ ಕ್ಷೇತ್ರದಿಂದ ಕನ್ನಡದ ಖ್ಯಾತ ಕವಿ ಪ್ರೊ. ಗೋಪಾಲಕೃಷ್ಣ ಅಡಿಗ ಅವರು ಜನಸಂಘದ ಅಭ್ಯರ್ಥಿಯಾಗಿ ಲೋಕಸಭೆಗೆ ಸ್ಪರ್ಧಿಸುತ್ತಾರೆಂದು ಭಾರತೀಯ ಜನಸಂಘದ ಕರ್ನಾಟಕ ಪ್ರಾಂತೀಯ ಸಮಿತಿಯ ಸಂಘಟನಾ ಕಾರ್ಯದರ್ಶಿ ಶ್ರೀ ಭಾವೂರಾವ್ ದೇಶಪಾಂಡೆ ಅವರು ಇಂದು ಇಲ್ಲಿ ಪತ್ರಕರ್ತರಿಗೆ ತಿಳಿಸಿದರು.