ರಾಜ್ಯದಲ್ಲಿ ಅಭಾವ ಸ್ಥಿತಿ: ಪರಿಹಾರ ಕ್ರಮಗಳಿಗೆ ಅಧಿಕಾರಿಗಳಿಗೆ ಆದೇಶ
ಕಲ್ಬುರ್ಗಿ, ಜುಲೈ 27– ಮಳೆ ಅಭಾವ ದಿಂದಾಗಿ ಬೀದರ್, ಕಲ್ಬುರ್ಗಿ, ಕೋಲಾರ, ತುಮಕೂರು, ಚಿತ್ರದುರ್ಗ, ಶಿವಮೊಗ್ಗ ಮತ್ತು ರಾಯಚೂರು ಹಾಗೂ ಬಳ್ಳಾರಿ ಭಾಗಗಳಲ್ಲಿ ಅಭಾವ ಪರಿಸ್ಥಿತಿ ತಲೆದೋರಿರುವುದು ವರದಿಯಾಗಿರುವುದಾಗಿ ರಾಜ್ಯಪಾಲ ಶ್ರೀ ಧರ್ಮವೀರ ಅವರು ಇಂದು ಇಲ್ಲಿಪತ್ರಕರ್ತರಿಗೆ ತಿಳಿಸಿದರು.
ದೀರ್ಘಾವಧಿ ಹಾಗೂ ಅಲ್ಪಾವಧಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು. ಜೋಳ ಮುಖ್ಯ ಆಹಾರ ಆಗಿರುವ ಜನರ ಅಗತ್ಯಗಳನ್ನು ಪೂರೈಸಲು ಮಧ್ಯಪ್ರದೇಶ, ರಾಜಸ್ಥಾನಗಳಿಂದ ಜೋಳವನ್ನು ತರಿಸಿಕೊಳ್ಳಲುಪ್ರಯತ್ನಿಸಲಾಗುವುದೆಂದೂ ತಿಳಿಸಿದರು.