ನವದೆಹಲಿ, ಆ. 4– ಗೋಲಕ್ನಾಥ್ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟು ನೀಡಿದ ತೀರ್ಪು ದೇಶದಲ್ಲಿನ ಸಾಮಾಜಿಕ–ಆರ್ಥಿಕ ಪ್ರಗತಿಗೆ ಭಾರಿ ಅಡಚಣೆಯುಂಟು ಮಾಡಿದೆ. ಕೇವಲ ಈ ಅಡಚಣೆಯನ್ನು ನಿವಾರಿಸುವುದೇ ಸಂವಿಧಾನದ (24ನೇ ತಿದ್ದುಪಡಿ) ಮಸೂದೆಯ ಉದ್ದೇಶ ಎಂದು ಕಾನೂನು ಸಚಿವ ಶ್ರೀ ಎಚ್.ಆರ್. ಗೋಖಲೆ ಅವರು ಇಂದು ಲೋಕಸಭೆಯಲ್ಲಿ ಹೇಳಿದರು.