ಸಂಯುಕ್ತ ರಂಗ ಸರ್ಕಾರದಲ್ಲಿ 2ನೇ ಬಾರಿಗೆ ಹಣಕಾಸು ಸಚಿವರಾಗಿ ನೇಮಕವಾದ ನಂತರ, ಸಮ್ಮೇಳನವೊಂದರಲ್ಲಿ ಮಾತನಾಡಿದ ಚಿದಂಬರಂ, ಭಾರತದಲ್ಲಿನ ರಿಯಾಯಿತಿಗಳಿಗೆ ಸಂಬಂಧಿಸಿದಂತೆ ಸಿದ್ಧಪಡಿಸಲಾಗುತ್ತಿರುವ ಶ್ವೇತಪತ್ರ ಮುಕ್ತಾಯದ ಹಂತದಲ್ಲಿದ್ದು, ಲೋಕಸಭಾ ಸದಸ್ಯರಿಗೆ ವಿತರಿಸಲಾಗುವುದು. ಕೆಲವೇ ದಿನಗಳಲ್ಲಿ ಇದರ ಬಿಡುಗಡೆ ಆಗಲಿದ್ದು, ಈ ಬಗ್ಗೆ ರಾಷ್ಟ್ರೀಯ ಚರ್ಚೆಗೆ ಆಹ್ವಾನಿಸಲಾಗುವುದು ಎಂದು ತಿಳಿಸಿದರು.