ನವದೆಹಲಿ, ನ. 23– ಮೈಸೂರು–ಮಹಾರಾಷ್ಟ್ರ ಗಡಿ ವಿವಾದವನ್ನು ಪರಿಹರಿಸುವ ಸಲುವಾಗಿ ನಿಶ್ಚಿತ ಕಾಲಾವಧಿ ಯನ್ನು ಗೊತ್ತು ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕೆ.ಸಿ.ಪಂತ್ ಅವರು, ಮರಾಠಿ ಮಾತನಾಡುವ ಜನ ಅಧಿಕವಾಗಿರುವ ಪ್ರದೇಶಗಳನ್ನು ಮಹಾರಾಷ್ಟ್ರದಲ್ಲಿ ವಿಲೀನಗೊಳಿಸಬೇಕು ಎಂದು ಒತ್ತಾಯಿಸಿದ ನಿಯೋಗವೊಂದಕ್ಕೆ ತಿಳಿಸಿದರೆಂದು ಗೊತ್ತಾಗಿದೆ.